Karnataka Govt Land Jihad : ಬೆಂಗಳೂರಿನಲ್ಲಿ ಪಶುಸಂಗೋಪನಾ ಇಲಾಖೆಯ ೫೦೦ ಕೋಟಿ ರೂಪಾಯಿಯ ೨ ಎಕರೆ ಜಮೀನನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರ !

ಬಿಜೆಪಿಯಿಂದ ಕಾಂಗ್ರೆಸ್ ಸರಕಾರದ ಮೇಲೆ ‘ಲ್ಯಾಂಡ್ ಜಿಹಾದ್’ ಆರೋಪ !

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರ್. ಅಶೋಕ

ಬೆಂಗಳೂರು – ರಾಜ್ಯದ ಕಾಂಗ್ರೆಸ್ ಸರಕಾರವು ೫೦೦ ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ೨ ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದೆ.  ಕಾಂಗ್ರೆಸ್ ಲ್ಯಾಂಡ್ ಜಿಹಾದ್ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಸ್ಥಳದಲ್ಲಿ ಪ್ರಸ್ತುತ ಪಶುವೈದ್ಯಕೀಯ ಆಸ್ಪತ್ರೆ ಇದೆ.
ವಿರೋಧ ಪಕ್ಷದ ನಾಯಕ ಅರ್. ಅಶೋಕ್ ಇವರು ಮಾತನಾಡಿ, ಒಂದು ವೇಳೆ ಖಾಲಿ ಜಾಗ ನೀಡಿದ್ದರೆ ಒಪ್ಪಿಕೊಳ್ಳಬಹುದಿತ್ತು; ಆದರೆ, ಅಲ್ಲಿ ಪಶುಸಂಗೋಪನಾ ಇಲಾಖೆಯ ಜಾಗ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗೆ ಮಿತಿ ಇರಬೇಕಲ್ಲವೇ ಬೆಂಗಳೂರಿನ ಹೃದಯ ಭಾಗದಲ್ಲಿರುವ ಪಶುಸಂಗೋಪನಾ ಇಲಾಖೆಯ ೨ ಎಕರೆ ಭೂಮಿಯನ್ನು ಮುಸ್ಲಿಮರಿಗೆ ಕೊಡುವುದು ನಿಮ್ಮ ಸಂಚಾಗಿದೆ. ಗೋವು ಮತ್ತಿತರ ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ಸರಕಾರಿ ಪಶುವೈದ್ಯಕೀಯ ಆಸ್ಪತ್ರೆಯನ್ನು ಮುಚ್ಚಿ ಆ ಜಾಗವನ್ನು ಮುಸ್ಲಿಮರಿಗೆ ನೀಡುವ ಅಗತ್ಯ ಏನಿತ್ತು ? ಪಶುವೈದ್ಯಕೀಯ ಆಸ್ಪತ್ರೆಯನ್ನು ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಸ್ಥಾಪಿಸಲಾಯಿತು, ಆದರೆ ಇತರ ಸಾಕುಪ್ರಾಣಿಗಳಿಗೂ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ೫೦೦ ಕೋಟಿ ಭೂಮಿ ಹಸ್ತಾಂತರಕ್ಕೆ ನಾವು ಅವಕಾಶ ನೀಡುವುದಿಲ್ಲ. ಕಾಂಗ್ರೆಸ್‌ನ ಈ ನಿರ್ಧಾರವನ್ನು ‘ಲ್ಯಾಂಡ್ ಜಿಹಾದ್’ ಎನ್ನಬಹುದೇ?, ಎಂದಿದ್ದಾರೆ