
ನವ ದೆಹಲಿ – 2016 ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿ ಮೊಹಮ್ಮದ್ ಗೌಸ್ ನಿಯಾಜಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಬಂಧಿಸಲಾಗಿದೆ. ಇದೀಗ ಅವನನ್ನು ಮುಂಬಯಿಗೆ ಕರೆತರಲಾಗಿದೆ. ಈತ ನಿಷೇಧಿತ ಜಿಹಾದಿ ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ದ ನಾಯಕನಾಗಿದ್ದಾನೆ. ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ನಡೆಸಿದ ಪ್ರಯತ್ನದಿಂದಾಗಿ ಆತನ ಬಂಧನವಾಗಿವೆ. ಗೌಸ್ನ ಯಾವುದೇ ಸುಳಿವು ನೀಡಿದವರಿಗೆ ಅಥವಾ ಹಿಡಿದು ಕೊಟ್ಟವರಿಗೆ ಎನ್.ಐ.ಎ. 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. ಬೆಂಗಳೂರಿನಲ್ಲಿ ರುದ್ರೇಶ್ ಹತ್ಯೆಯ ನಂತರ, ಅವನು ಪರಾರಿಯಾಗಿ ಬೇರೆ ಬೇರೆ ದೇಶಗಳಲ್ಲಿ ವಾಸಿಸುತ್ತಿದ್ದನು.
ಈ ಹಿಂದೆ ರುದ್ರೇಶ್ ಹತ್ಯೆಗೆ ಸಂಬಂಧಿಸಿದಂತೆ 4 ಜನರನ್ನು ಬಂಧಿಸಲಾಗಿತ್ತು. ಇವರಲ್ಲಿ ಪ್ರಮುಖ ಆರೋಪಿ 40 ವರ್ಷದ ಅಜೀಂ ಷರೀಫ್ ನನ್ನು ಪೊಲೀಸರು ನವೆಂಬರ್ 2016ರಲ್ಲಿ ಬಂಧಿಸಿದ್ದರು. ಹಿಂದೂಗಳಲ್ಲಿ ಆತಂಕವನ್ನು ಹುಟ್ಟುಹಾಕುವ ಉದ್ದೇಶದಿಂದ ಈ ಹತ್ಯೆಯನ್ನು ಮಾಡಲಾಗಿದ್ದು, ಇದು ಭಯೋತ್ಪಾದಕ ಕೃತ್ಯವಾಗಿತ್ತು.
ಸಂಪಾದಕೀಯಹಿಂದೂ ನಾಯಕರ ಕೊಲೆ ಮಾಡಿದ ನಂತರ ಜಿಹಾದಿ ಭಯೋತ್ಪಾದಕರು ದೇಶದಿಂದ ಹೇಗೆ ಪರಾರಿಯಾಗುತ್ತಾರೆ ? ಭದ್ರತಾ ವ್ಯವಸ್ಥೆಗಳು ನಿದ್ರಿಸುತ್ತಿವೆಯೇ ? |
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border