
ನವದೆಹಲಿ – ಪಾಕಿಸ್ತಾನದಲ್ಲಿ ಶಹಬಾಜ ಷರೀಫ ಸರಕಾರದ ಸ್ಥಾಪನೆಯ ಹಿನ್ನೆಲೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರ ಸಚಿವ ಎಸ್. ಜೈಶಂಕರ ಇವರು ದಕ್ಷಿಣ ಏಶಿಯಾ ಸಹಕಾರ ಸಂಘಟನೆ ಅರ್ಥಾತ್ (ಸಾರ್ಕ್) ಶೀಘ್ರ ಪುನರುಜ್ಜೀವನದ ಸಾಧ್ಯತೆಯನ್ನು ತಳ್ಳಿ ಹಾಕಿದ್ದಾರೆ. ಪಾಕಿಸ್ತಾನದ ಹೆಸರನ್ನು ತೆಗೆದುಕೊಳ್ಳದೇ ಜೈಶಂಕರ ಮಾತನಾಡಿ, ಸಾರ್ಕ ಸಂಕಟದಲ್ಲಿದೆ; ಕಾರಣ ಅದರ ಸದಸ್ಯ ದೇಶವೊಂದು ಭಯೋತ್ಪಾದಕತೆಯನ್ನು ಬಹಿರಂಗವಾಗಿ ಬೆಂಬಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ಕನ ಭವಿಷ್ಯದ ಮೇಲೆಯೂ ಗಂಭೀರ ಪ್ರಶ್ನೆಯನ್ನು ಎತ್ತಲಾಗುತ್ತಿದೆ.
1. ಸಾರ್ಕ್ ಒಂದು ಪ್ರಾದೇಶಿಕ ಸಂಘಟನೆಯಾಗಿದ್ದು, ಇದರಲ್ಲಿ ಭಾರತ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ಸೇರಿವೆ. 2016 ರಿಂದ ಸಾರ್ಕ ಪರಿಣಾಮಕಾರಿಯ ಕುರಿತು ಪ್ರಶ್ನಿಸಲಾಗುತ್ತಿತ್ತು.
2. ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ಭಾರತೀಯ ಸೇನೆಯ ನೆಲೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ, ಬಾಂಗ್ಲಾದೇಶ, ಭೂತಾನ ಮತ್ತು ಅಫ್ಘಾನಿಸ್ತಾನ ಇದರಲ್ಲಿ ಭಾಗವಹಿಸಲು ನಿರಾಕರಿಸಿದ್ದರು.
3. ಭಾರತವು ಸಾರ್ಕ ಸ್ಥಳದಲ್ಲಿ `ಬಿಮಸ್ಟೆಕ’ ನ (ಬಹುಕ್ಷೇತ್ರೀಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳದ ಉಪಸಾಗರದ ಮುಂದಾಳತ್ವ) ಪ್ರಚಾರವನ್ನು ಪ್ರಾರಂಭಿಸಿದೆ. ವಿದೇಶಾಂಗ ಸಚಿವ ಜೈಶಂಕರ ಮಾತನಾಡಿ, ಬಿಮ್ಸ್ಟೆಕ್ ಅಡಿಯಲ್ಲಿ ಸಹಕಾರವು ಮುಂದುವರಿಯುತ್ತಿದೆ ಮತ್ತು ಸಂಘಟನೆಯು ವೃದ್ಧಿಸುವ ಇಚ್ಛೆಯಿದೆ ಎಂದು ಹೇಳಿದ್ದಾರೆ.
Ahead of the formation of a new government in Pakistan, External Affairs Minister S Jaishankar on Saturday ruled out any immediate possibility of revival of regional grouping SAARC in view of Islamabad’s “toolkit” of using terrorism in different ways, … https://t.co/WXHrqjUhJy
— Business Standard (@bsindia) March 3, 2024
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು