|

ಮಥುರಾ (ಉತ್ತರ ಪ್ರದೇಶ) – ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ ಅಧ್ಯಕ್ಷ ಅಶುತೋಷ್ ಪಾಂಡೆಯ ಇವರು ಸಾಮಾಜಿಕ ಜಾಲತಾಣಗಳ ಮೂಲಕ ಒಂದು ವಿಡಿಯೋವನ್ನು ಪ್ರಸಾರ ಮಾಡಿ, ಜಿಲ್ಲಾಡಳಿತ ಮತ್ತು ಈದ್ಗಾ ಮಸೀದಿ ಸಮಿತಿಗೆ ಎಚ್ಚರಿಕೆ ನೀಡಿದ್ದಾರೆ. ಏಪ್ರಿಲ್ 1 ಮತ್ತು 2 ಸಪ್ತಮಿ ಮತ್ತು ಅಷ್ಟಮಿ ದಿನದಂದು ಮಸೀದಿಯ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಕೃಷ್ಣ ಬಾವಿಯ ಪೂಜೆಗಾಗಿ ಹಿಂದೂಗಳು ಬರುತ್ತಾರೆ ಎಂದು ಹೇಳಿದ್ದಾರೆ. ಯಾರಿಗಾದರೂ ಧೈರ್ಯವಿದ್ದರೆ, ಅವರು ತಡೆದು, ತೋರಿಸಲಿ. ನಾವು ಇಲ್ಲಿ ಪೂಜೆ ಮಾಡಿಯೇ ಮಾಡುತ್ತೇವೆ. ಪೂಜೆ ಮಾಡುವುದು ನಮ್ಮ ಹಕ್ಕು. ಮಾರ್ಚ 5 ರಂದು ನಾವು ಜಿಲ್ಲಾಧಿಕಾರಿಗಳಲ್ಲಿ ಅನುಮತಿಯನ್ನು ಕೋರಿದ್ದೇವೆ;

ಆದರೆ ಇದುವರೆಗೂ ನಮಗೆ ಇದರ ಬಗ್ಗೆ ಏನೂ ಮಾಹಿತಿ ನೀಡಿರುವುದಿಲ್ಲ. ಆದರೆ ನಾವು ನಿಲ್ಲುವುದಿಲ್ಲ. ಸಧ್ಯಕ್ಕೆ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನ ಮತ್ತು ಶಾಹಿ ಈದ್ಗಾ ಮಸೀದಿಯ ಭದ್ರತೆಗಾಗಿ ಕೇಂದ್ರೀಯ ಕೈಗಾರಿಕಾ ಭದ್ರತಾ ದಳ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ಎರಡೂ ಕಡೆಗಳಲ್ಲಿ ಬರುವ ಹೋಗುವ ಪ್ರತಿಯೊಬ್ಬ ವ್ಯಕ್ತಿಯನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ. ಎರಡೂ ಕಡೆಗಳಲ್ಲಿ ಮೊಬೈಲ್ ನಿಷೇಧಿಸಲಾಗಿದೆ. ಟ್ರಸ್ಟ ಪಾಂಡೆ ಅವರ ವಿಡಿಯೋವನ್ನು ಪ್ರಸಾರ ಮಾಡಿದ ನಂತರ ಜಿಲ್ಲಾಡಳಿತ ಭದ್ರತೆಯನ್ನು ಹೆಚ್ಚಿಸಿದೆ.
2024 ರಿಂದ ಮಹಾರಾಷ್ಟ್ರದಿಂದ 3 ಸಾವಿರದ 541 ಬಾಂಗ್ಲಾದೇಶಿ ನುಸುಳುಕೋರರ ಬಾಂಗ್ಲಾದೇಶಕ್ಕೆ ಗಡೀಪಾರು !
ಶ್ರೀ ಚಾಂಗದೇವ್ ಮಹಾರಾಜರ ದೇವಸ್ಥಾನದಲ್ಲಿ ಮತಾಂಧರಿಂದ ಅತಿಕ್ರಮಣ!
ಭಾರತವು ಹಿಂದೂ ರಾಷ್ಟ್ರವೇ ಆಗಿದೆ! : Union Minister Pralhad Joshi
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಹಿಂದೂ ಧರ್ಮದ ವಿಭಜನೆಗಾಗಿ ಪ್ರಿಯಾಂಕ್ ಖರ್ಗೆ ಅವರ ಷಡ್ಯಂತ್ರ! – ಕೋಟ ಶ್ರೀನಿವಾಸ ಪೂಜಾರಿ, ಸಂಸದರು, ಭಾಜಪ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಿಷನ್-2047 ಪ್ರಕಾರ ಎಲ್ಲಾ ಭಯೋತ್ಪಾದಕರು ಹೊರಬಂದು ಆಡಳಿತವನ್ನು ಉರುಳಿಸಲಿದ್ದಾರೆ!