|

ತುಮಕೂರು – ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ೮೦೦ ವರ್ಷಗಳಷ್ಟು ಹಳೆಯ ಚೋಳರ ಕಾಲದ ಶ್ರೀ ಕಲ್ಲೇಶ್ವರಸ್ವಾಮಿ ದೇವಾಲಯದ ರಥವನ್ನು ಅಪರಿಚಿತರು ಬೆಂಕಿ ಹಚ್ಚಿದ್ದಾರೆ. ಮಾರ್ಚ್ ೧೨ ರಂದು ಈ ಘಟನೆ ನಡೆದಿದೆ. ಈ ದೇವಾಲಯವು ದತ್ತಿ ಇಲಾಖೆಯ ಪಟ್ಟಿಯಲ್ಲಿ ‘ಸಿ‘ ದರ್ಜೆಯ ದೇವಾಲಯವಾಗಿದೆ. ಇಲ್ಲಿ ಮಾರ್ಚ್ ೨೦ ರಿಂದ ಜಾತ್ರೆ ಆರಂಭವಾಗಲಿದೆ. ಜಾತ್ರೆಯ ಸಿದ್ಧತೆಯ ಮೊದಲೇ ಈ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಉತ್ತರ ಭಾರತದ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಈ ಸಂದರ್ಭದಲ್ಲಿ ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ರಾಜ್ಯ ಸಂಚಾಲಕ ಶ್ರೀ. ಮೋಹನ ಗೌಡ ಇವರು ಪ್ರಸಾರ ಮಾಡಿದ ಮನವಿಯಲ್ಲಿ, ‘ಈ ಘಟನೆ ಅತ್ಯಂತ ಗಂಭೀರವಾಗಿದ್ದು ಇದರ ಹಿಂದಿರುವ ಅಪರಾಧಿ ಯಾರಿದ್ದಾರೆ?‘, ‘ಯಾವ ಉದ್ದೇಶದಿಂದ ಈ ಕೃತ್ಯವನ್ನು ಮಾಡಿದ್ದಾರೆ?‘, ಇದರ ಹಿಂದಿನ ಷಡ್ಯಂತ್ರವೇನು?‘ ಇದರ ತನಿಖೆಯಾಗಬೇಕು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು. ಸರಕಾರ ಹಿಂದೂ ದೇವಾಲಯಗಳಿಂದ ತೆರಿಗೆ ಸಂಗ್ರಹಿಸುತ್ತದೆ; ಆದರೆ ಅದರ ಸಂರಕ್ಷಣೆ ಮಾಡುವುದಿಲ್ಲ, ಇದು ಅತ್ಯಂತ ಖಂಡನೀಯವಾಗಿದೆ. ದೇವಸ್ಥಾನದ ಜಾತ್ರೆಗೆ ಸರಕಾರ ರಕ್ಷಣೆ ನೀಡಬೇಕು‘, ಎಂದು ಹೇಳಿದ್ದಾರೆ.
Miscreants set fire to the chariot of the 800-year-old Chola-era Sri Kalleshwara Swamy temple at Nittoor in Gubbi taluk of Tumkur dist. today. It is a C grade temple of the Religious Endowment Dept. & its annual fair starts from March 20th.
We demand arrest of culprits @RLR_BTM pic.twitter.com/3ECZkQYXbI
— 🚩Mohan gowda🇮🇳 (@Mohan_HJS) March 11, 2024
(ಈ ಮೇಲೆ ಪ್ರಸಿದ್ಧಗೊಳಿಸಿದ ಚಿತ್ರದ ಉದ್ದೇಶ ಯಾರ ಧಾರ್ಮಿಕ ಭಾವನೆಗಳಿಗೆ ನೋವನ್ನು ಉಂಟು ಮಾಡುವುದಾಗಿರದೇ ನಿಜ ಸ್ಥಿತಿ ತಿಳಿಸುವುದಾಗಿದೆ)
ಸಂಪಾದಕೀಯ ನಿಲುವುಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ |
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))