|

ನವ ದೆಹಲಿ – ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಇವರು ಮಾಹಿತಿ ನೀಡುವಾಗ, ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಈ ಅವಧಿಯಲ್ಲಿ ಸಿಕ್ಕಿಂ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿಯೂ ವಿಧಾನಸಭೆ ಚುನಾವಣೆ ನಡೆಯಲಿದೆ. ಅಲ್ಲದೆ ಕೆಲವೆಡೆ ಉಪಚುನಾವಣೆ ನಡೆಯಲಿದೆ. ಹಿಂಸಾಚಾರ ತಡೆಯಲು ಸೂಕ್ತ ಕ್ರಮಗಳನ್ನೂ ಕೈಗೊಂಡಿದ್ದೇವೆ. ಯಾವುದೇ ರೀತಿಯಲ್ಲಿ ಹಿಂಸೆಯನ್ನು ತಡೆಯಲು ನಾವು ಸಿದ್ಧರಿದ್ದೇವೆ ಎಂದು ರಾಜೀವ ಕುಮಾರ್ ಸ್ಪಷ್ಟಪಡಿಸಿದರು.
ಮತದಾನ ಪ್ರಕ್ರಿಯೆಯ ಹಂತಗಳು
ಹಂತ |
ದಿನಾಂಕ |
ಲೋಕಸಭಾಕ್ಷೇತ್ರಗಳು |
| ಹಂತ 1 | ಎಪ್ರಿಲ್ 19 | 102 |
| ಹಂತ 2 | ಎಪ್ರಿಲ್ 26 | 89 |
| ಹಂತ 3 | ಮೇ 7 | 94 |
| ಹಂತ 4 | ಮೇ 13 | 96 |
| ಹಂತ 5 | ಮೇ 20 | 49 |
| ಹಂತ 6 | ಮೇ 25 | 57 |
| ಹಂತ 7 | ಜೂನ್ 1 | 57 |
| ಮತ ಏಣಿಕೆ | ಜೂನ್ 4 |
ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಮತದಾರರಿಗೆ ಎಲ್ಲಾ ಮಾಹಿತಿ ಸಿಗಲಿದೆ !
ಈಗ ಪ್ರತಿಯೊಬ್ಬ ಮತದಾರನಿಗೆ ತನ್ನ ಮತಗಟ್ಟೆಯನ್ನು ಕಂಡುಹಿಡಿಯುವುದು ಸುಲಭವಾಗುತ್ತದೆ. ಮತದಾರರಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗಿದೆ. ಅದೇ ರೀತಿ ‘ನೋ ಯುವರ್ ಕ್ಯಾಂಡಿಡೇಟ್’ ಆ್ಯಪ್ ಮೂಲಕ ಮತದಾರರು ತಮ್ಮ ಕ್ಷೇತ್ರದ ಅಭ್ಯರ್ಥಿಯ ಬಗ್ಗೆ ಎಲ್ಲ ಮಾಹಿತಿ ಪಡೆಯುತ್ತಾರೆ ಎಂದು ಮಾಹಿತಿ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಪ್ರಚಾರದಲ್ಲಿ ಭಾಷೆಯ ಮಟ್ಟವನ್ನು ಕಾಯ್ದುಕೊಳ್ಳಲು ಪ್ರಚಾರಕರಿಗೆ ನೋಟಿಸ್ ನೀಡಲಾಗುವುದು !
ರಾಜೀವ್ ಕುಮಾರ್ ಮಾತನಾಡಿ, ಪ್ರಚಾರದ ವೇಳೆ ಕೀಳುಮಟ್ಟದ ಭಾಷೆ ಹಾಗೂ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ದೊಡ್ಡ ಪ್ರಚಾರಕರಿಗೆ ನೋಟಿಸ್ ನೀಡಲಾಗುವುದು. ಆದ್ದರಿಂದ ಚುನಾವಣಾ ಪ್ರಚಾರದಲ್ಲಿ ನಿಗಾ ವಹಿಸುವಂತೆ ಆಯೋಗವು ಪ್ರಚಾರಕರಿಗೆ ಆದೇಶಿಸಿದೆ.
ಚುನಾವಣೆ ವೇಳೆ ಹಣ ಹಂಚಿಕೆ ನಡೆಯುತ್ತಿದ್ದರೆ 100 ನಿಮಿಷದೊಳಗೆ ತಂಡ ತಲುಪುತ್ತದೆ !
ಚುನಾವಣೆಯನ್ನು ಸಿದ್ಧತೆ ನಡೆಸುವಾಗ ನಮ್ಮ ಮುಂದೆ ಒಟ್ಟು 4 ಸವಾಲುಗಳಿತ್ತು. ಅದರಲ್ಲಿ ಗೂಂಡಾಗಿರಿ, ಹಣ ಮತ್ತು ವಸ್ತುಗಳ ವಿತರಣೆ ಮತ್ತು ವದಂತಿಗಳನ್ನು ತಡೆಯುವುದು ಇದರಲ್ಲಿ ಸೇರಿದೆ. ಇದಕ್ಕಾಗಿ ಜಿಲ್ಲಾಧಿಕಾರಿಗೆ ಸೂಕ್ತ ಸೂಚನೆ ನೀಡಿದ್ದೇವೆ. ಮದ್ಯ, ಸೀರೆ ವಿತರಣೆಯ ಮೇಲೆ ನಿಗಾ ಇಡಲಿದ್ದು, ಈ ರೀತಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಚುನಾವಣೆ ಸಂದರ್ಭದಲ್ಲಿ ಮತದಾರರಲ್ಲಿ ಹಣ ಹಂಚಿಕೆ ನಡೆಯುತ್ತಿದ್ದರೆ, ಅವ್ಯವಹಾರ ನಡೆದರೆ ನಾಗರಿಕರು ಅದರ ಫೊಟೊ ತೆಗೆದು ‘ಸಿ ವಿಜಿಲ್’ ಆ್ಯಪ್ಗೆ ಅಪ್ಲೋಡ್ ಮಾಡಿದ ನಂತರ ನಿಮ್ಮ ಮೊಬೈಲ್ ಫೋನ್ ಇರುವ ಸ್ಥಳವನ್ನು ಅಕ್ಷಾಂಶದಿಂದ ಗುರುತಿಸುತ್ತೇವೆ. ರೇಖಾಂಶ ಮತ್ತು ನಮ್ಮ ತಂಡವು 100 ನಿಮಿಷಗಳಲ್ಲಿ ಅಲ್ಲಿಗೆ ತಲುಪುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಮಾಹಿತಿ ನೀಡಿದರು (100 ನಿಮಿಷಗಳ ಹಣ ಹಂಚುವವರು ಮತ್ತು ದುಷ್ಕರ್ಮಿಗಳು ಈ ತಂಡಕ್ಕಾಗಿ ಕಾಯುತ್ತಾ ಇರುತ್ತಾರೆಯೇ ? – ಸಂಪಾದಕರು)
12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆಯಲ್ಲಿ ಹೆಚ್ಚಳ !
ದೇಶದ 12 ರಾಜ್ಯಗಳಲ್ಲಿ ಪುರುಷ ಮತದಾರರಿಗೆ ಹೋಲಿಸಿದರೆ ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿದೆ. ಭಾರತದಲ್ಲಿ ಈ ವರ್ಷ 97 ಕೋಟಿ ಮತದಾರರಿದ್ದಾರೆ.
ಕರ್ನಾಟಕದಲ್ಲಿ ಒಟ್ಟು ಎರಡು ಹಂತಗಳಲ್ಲಿ ಮತದಾನ
ಕರ್ನಾಟಕದಲ್ಲಿ ಒಟ್ಟು ಎರಡು ಹಂತಗಳಲ್ಲಿ ಮತದಾನ ನಡೆಯಬೇಕಾಗಿದೆ. ಮೊದಲ ಹಂತದಲ್ಲಿ ಏಪ್ರಿಲ್ 26 ರಂದು 14 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಬೇಕಾಗಿದೆ. ಮೇ 7ರಂದು ಎರಡನೇ ಹಂತದಲ್ಲಿ ಉಳಿದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಬೇಕಾಗಿದೆ.
ಮೊದಲ ಹಂತದ ಚುನಾವಣೆ
ಚಿತ್ರದುರ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ಪಶ್ಚಿಮ ಪಕ್ಷಗಳಿಗೆ ಚುನಾವಣೆ ನಡೆಯಬೇಕಾಗಿದೆ.
ಎರಡನೇ ಹಂತದ ಚುನಾವಣೆ
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್ಸಿ), ಗುಲ್ಬರ್ಗಾ (ಎಸ್ಸಿ), ರಾಯಚೂರು (ಎಸ್ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ
ಮೊದಲ ಹಂತದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ಮಾರ್ಚ್ 28 ರಂದು ಪ್ರಾರಂಭವಾಗಬೇಕಾಗಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ರಂದು ಕೊನೆಯ ದಿನವಾಗಿದೆ. ಏಪ್ರಿಲ್ 5 ರಂದು ಪರಿಶೀಲನೆ ನಡೆಯಬೇಕಾಗಿದೆ, ಮತ್ತು ನಾಮಪತ್ರ ಹಿಂಪಡೆಯಲು ಏಪ್ರಿಲ್ 8 ರಂದು ಕೊನೆಯ ದಿನವಾಗಿದೆ.
ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಏಪ್ರಿಲ್ 12 ರಂದು ಆರಂಭವಾಗಬೇಕಾಗಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 19 ರಂದು ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ ನಡೆಯಬೇಕಾಗಿದೆ
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”