ಎಲ್ಲಾ ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆಗೆ ತೆಗೆದುಕೊಳ್ಳುವುದರ ವಿರುದ್ಧ ಮಸಿದಿ ಕಮೀಟಿಯ ಅರ್ಜಿಯನ್ನು ತಿರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯ

ಶ್ರೀ ಕೃಷ್ಣ ಜನ್ಮಭೂಮಿ ಪ್ರಕರಣ

ಮಥುರಾ (ಉತ್ತರ ಪ್ರದೇಶ) – ಶ್ರೀಕೃಷ್ಣಜನ್ಮಭೂಮಿ ಪ್ರಕರಣದಲ್ಲಿ ಮಸಿದಿ ಕಮೀಟಿಯ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ಅಲಹಾಬಾದ ಉಚ್ಚ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದ 15 ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆ ಮಾಡುವ ನಿರ್ಣಯವನ್ನು ನೀಡಿತ್ತು; ಆದರೆ ಮಸಿದಿ ಕಮಿಟಿಯು ಮಾತ್ರ ಉಚ್ಚ ನ್ಯಾಯಾಲಯದ ಈ ನಿರ್ಣಯವನ್ನು ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿತ್ತು. ಈ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿತು. ಎಲ್ಲಾ ಪ್ರಕರಣಗಳು ಒಂದೇ ರೀತಿಯದ್ದಾಗಿರುವುದರಿಂದ ಅದರ ದಾಖಲೆಗಳು ಸಮಾನವಾಗಿರುವುದರಿಂದ ಅವುಗಳ ಆಧಾರದಲ್ಲಿ ತೀರ್ಪು ನೀಡಲಿದ್ದಾರೆ. ಆದ್ದರಿಂದ ನ್ಯಾಯಾಲಯದ ಸಮಯವನ್ನು ಉಳಿಸುವ ಉದ್ದೇಶದಿಂದ ಒಟ್ಟಿಗೆ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಅಲಹಾಬಾದ ಉಚ್ಚ ನ್ಯಾಯಾಲಯವು ಈ ಆದೇಶವನ್ನು ನೀಡಿತ್ತು.