
ಅಜ್ಮೀರ್(ರಾಜಸ್ಥಾನ) – ಮಾರ್ಚ್ ೧೭ ರ ಸಂಜೆ ನಡೆದ ಸಾಬರಮತಿ-ಆಗ್ರಾ ಸೂಪರ್ ಫಾಸ್ಟ್ ಎಕ್ಸಪ್ರೆಸ್ ರೈಲಿನ ಅಪಘಾತಕ್ಕೆ ಕಾರಣ ಏನೆಂಬುದು ಇದೀಗ ಬೆಳಕಿಗೆ ಬಂದಿದೆ. ಲೋಕೋ ಪೈಲಟ್(ಚಾಲಕ) ಮತ್ತು ಸಹಾಯಕ ಲೋಕೋಪೈಲಟ್ ಇವರ ನಡುವೆ ರೈಲಿನ ವೇಗದ ವಿಚಾರವಾಗಿ ಜಗಳವಾಗಿದ್ದೇ ಈ ಅಪಘಾತಕ್ಕೆ ಕಾರಣ ಎಂದು ವಿಚಾರಣೆ ವೇಳೆ ಈ ಚಾಲಕರು ತಿಳಿಸಿದ್ದಾರೆ. ಜಗಳದಲ್ಲಿ ಮುಳುಗಿದ್ದ ಇವರಿಬ್ಬರು ಸಿಗ್ನಲ್ನಲ್ಲಿ ಬ್ರೇಕ್ ಹಾಕಲು ಮರೆತರು. ರೈಲಿನ ವೇಗ ಗಂಟೆಗೆ ೯೦ ಕಿ.ಮಿ.ಇರುವಾಗ ಬ್ರೇಕ್ ಹಾಕಿದ ಕಾರಣ ಅದು ರೈಲು ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆಯಿತು. ಈ ಅಪಘಾತದಲ್ಲಿ ರೈಲಿನ ಕೆಲ ಕೋಚ್ಗಳು ಹಳಿ ತಪ್ಪಿದವು, ಅನೇಕ ರೈಲುಗಳನ್ನು ರದ್ದು ಪಡಿಸಲಾಯಿತು, ಅಲ್ಲದೇ ಈ ಅಪಘಾತದಲ್ಲಿ ೩ ಜನರು ಗಾಯಗೊಂಡಿದ್ದರು.
ಸಂಪಾದಕೀಯ ನಿಲುವುಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡುವ ಇಂತಹ ಚಾಲಕರ ವಿರುದ್ಧ ದೂರು ದಾಖಲಿಸಿ ಜೈಲಿಗೆ ತಳ್ಳಬೇಕು ! |
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein