ಮೋದಿ ಮೋದಿ ಅಂತ ಕೂಗಿದರೇ ವಿದ್ಯಾರ್ಥಿಗಳ ಕಪಾಳಕ್ಕೆ ಬಾರಿಸಿ ! – ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ

  • ರಾಜ್ಯ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿಕೆ !

  • ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು – ಪ್ರಧಾನಿ ಮೋದಿಯವರು 2 ಕೋಟಿ ಉದ್ಯೋಗಗಳ ಭರವಸೆ ನೀಡಿದ್ದರು; ಆದರೆ ಅದನ್ನು ಪೂರ್ಣ ಮಾಡಿಲ್ಲ. ‘ಮೋದಿ-ಮೋದಿ’ ಎಂದು ಕೂಗುತ್ತಿರುವ ಯುವ ಬೆಂಬಲಿಗರು ಮತ್ತು ವಿದ್ಯಾರ್ಥಿಗಳ ಕಪಾಳಕ್ಕೆ ಬಾರಿಸಬೇಕು ಎಂದು ಮಾ.25ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಸರಕಾರದ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಹಾಗೂ ಕರ್ನಾಟಕದ ಬಿಜೆಪಿ ನಾಯಕ ಅರ್. ಅಶೋಕ್ ಅವರು ಮಂತ್ರಿ ಶಿವರಾಜ್ ಅವರ ವಿರುದ್ಧ ಚುನಾವಣಾ ಆಯೋಗದಲ್ಲಿ ದೂರು ನೀಡಿದ್ದಾರೆ.

ಶಿವರಾಜ್ ತಂಗಡಗಿ ಮುಂದೆ ಮಾತನಾಡಿ, ಬಿಜೆಪಿ ಚುನಾವಣೆಗಾಗಿ ಸದ್ಯ ಪ್ರಚಾರ ನಡೆಸುತ್ತಿದೆ. ಈಗ ಅವರು ಯಾವ ಬಾಯಿಯಿಂದ ಮತ ಕೇಳುತ್ತಿದ್ದಾರೆ? ವಿದ್ಯಾರ್ಥಿಗಳು ಉದ್ಯೋಗ ಕೇಳಿದರೆ ತರಕಾರಿ ಮಾರಲು ಹೇಳುತ್ತಾರೆ. ಬಿಜೆಪಿಗೆ ನಾಚಿಕೆಯಾಗಬೇಕು ಎಂದು ಖಾರವಾಗಿ ನುಡಿದರು.