
ಡೆಹ್ರಾಡೂನ (ಉತ್ತರಾಖಂಡ) – ಉತ್ತರಾಖಂಡದ ಉಧಮಸಿಂಹ ನಗರದ ಪ್ರಮುಖ ಧಾರ್ಮಿಕ ಸ್ಥಳವಾದ ನಾನಕಮತ್ತಾ ಗುರುದ್ವಾರದ ಮುಖ್ಯ ಜತ್ತೇದಾರ್ ಬಾಬಾ ತರಸೆಮ ಸಿಂಹರನ್ನು ಮಾರ್ಚ್ 28 ರಂದು ಬೆಳಿಗ್ಗೆ ಹತ್ಯೆ ಮಾಡಲಾಗಿದೆ. ದ್ವಿಚಕ್ರವಾಹನದಿಂದ ಬಂದ ಇಬ್ಬರು ಅವರ ಮೇಲೆ ಗುಂಡಿನ ದಾಳಿ ನಡೆಸಿದರು. ಗಾಯಗೊಂಡ ಬಾಬಾ ತಾರಸೆಮ ಅವರನ್ನು ಖತಿಮಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು. ಬಾಬಾ ತಾರಸೆಮ ಸಿಂಹ ಇವರು ಇಡೀ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದರು. ಈ ಕೊಲೆಯ ಹಿಂದಿನ ಕಾರಣಗಳು ಇದುವರೆಗೂ ತಿಳಿದುಬಂದಿಲ್ಲ.
ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಟಿ.ಸಿ. ಇವರು ಮಾತನಾಡಿ, ಈ ಘಟನೆ ಬೆಳಗ್ಗೆ 6.15ರ ಸುಮಾರಿಗೆ ನಡೆದಿದೆ. ಆ ಸಮಯದಲ್ಲಿ ಬಾಬಾಜಿ ಗುರುದ್ವಾರದ ಒಳಗೆ ಮುಖ್ಯ ದ್ವಾರದ ಎದುರಿನ ಖುರ್ಚಿಯಲ್ಲಿ ಕುಳಿತಿದ್ದರು. ಅವರು ತಮ್ಮ ಮೊಬೈಲನಲ್ಲಿ ಎನೋ ಮಾಡುತ್ತಿರುವಾಗ, ಇಬ್ಬರು ಪೇಟಧಾರಿಗಳು ದ್ವಿಚಕ್ರವಾಹನದಿಂದ ಬಂದು ಬಾಬಾಜಿ ಅವರ ಮೇಲೆ ಕೆಲವೇ ಸೆಕೆಂಡುಗಳಲ್ಲಿ ಎರಡು ಗುಂಡುಗಳನ್ನು ಹಾರಿಸಿದರು ಮತ್ತು ಪರಾರಿಯಾದರು. ಸಿಸಿಟಿವಿ ದೃಶ್ಯಾವಳಿಯಲ್ಲಿ ಇಬ್ಬರ ಮುಖವೂ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇಬ್ಬರೂ ಸಿಖ್ಖರು ಮತ್ತು ಪರಿಚಿತರಾಗಿದ್ದರು. ಪೊಲೀಸರು ಆರೋಪಿಗಳನ್ನು ಬಂಧಿಸಲು 8 ರಿಂದ 10 ದಳಗಳನ್ನು ರಚಿಸಿದ್ದಾರೆ.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ