Bharat Ratna Award : ರಾಷ್ಟ್ರಪತಿಗಳಿಂದ ೪ ಜನರಿಗೆ ಮರಣೋತ್ತರ ಭಾರತರತ್ನ ಪುರಸ್ಕಾರ !

ನವದೆಹಲಿ – ಮಾರ್ಚ್ ೩೦ ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಇವರ ಹಸ್ತದಿಂದ, ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್,ಪಿ.ವಿ.ನರಸಿಂಹರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಮತ್ತು ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮಿನಾಥನ್ ಇವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಲಾಯಿತು. ಈ ನಾಲ್ವರ ಕುಟಂಬಸ್ಥರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಅನ್ಯ ಗಣ್ಯರು ಉಪಸ್ಥಿತರಿದ್ದರು. ದೇಶದಲ್ಲಿ ಇದುವರೆಗೆ ೫೩ ಮಹನೀಯರಿಗೆ ಭಾರತರತ್ನ ಪುರಸ್ಕಾರ ನೀಡಲಾಗಿದೆ.