|

ಮಹಾರಾಜಗಂಜ (ಉತ್ತರಪ್ರದೇಶ) – ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಇಲ್ಲಿಂದ 3 ಜಿಹಾದಿ ಭಯೋತ್ಪಾದಕರನ್ನು ಬಂಧಿಸಿದೆ. ಇವರಲ್ಲಿ 2 ಪಾಕಿಸ್ತಾನಿಗಳು ಮತ್ತು ಒಬ್ಬ ಕಾಶ್ಮೀರದವನಾಗಿದ್ದಾನೆ. ಈ ಮೂವರು ನೇಪಾಳದಿಂದ ಭಾರತದಲ್ಲಿ ನುಸುಳುತ್ತಿರುವಾಗ ಬಂಧಿಸಲಾಯಿತು. ಈ ಮೂವರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ.ನ ನೆರವಿನೊಂದಿಗೆ ಭಯೋತ್ಪಾದಕ ಸಂಘಟನೆ ಹಿಜ್ಬುಲ ಮುಜಾಹಿದ್ದೀನನಿಂದ ಭಯೋತ್ಪಾದಕ ಚಟುವಟಿಕೆಯ ತರಬೇತಿ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ಅವರ ಬಂಧನದ ಬಳಿಕ ಭಾರತ ಮತ್ತು ನೇಪಾಳ ಗಡಿಯಲ್ಲಿ ತೀವ್ರ ನಿಗಾ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ. ಈ ವಿಷಯದಲ್ಲಿ ಪೊಲೀಸರು ಮಾತನಾಡಿ, ಕಳೆದ ಕೆಲವು ತಿಂಗಳುಗಳಿಂದ ಐ.ಎಸ್.ಐ. ಪಾಕಿಸ್ತಾನಿ ನಾಗರಿಕರು ಸೇರಿದಂತೆ ಇತರ ಕೆಲವು ಭಯೋತ್ಪಾದಕರನ್ನು ಭಾರತಕ್ಕೆ ಕಳುಹಿಸುವ ಸಿದ್ಧತೆಯಲ್ಲಿರುವ ಬಗ್ಗೆ ಮಾಹಿತಿ ದೊರಕಿತ್ತು. ಚುನಾವಣೆ ವೇಳೆ ಈ ಭಯೋತ್ಪಾದಕರು ರಕ್ತಪಾತ ನಡೆಸಬಹುದು ಎಂಬ ಮಾಹಿತಿ ಇತ್ತು. ಇದಕ್ಕಾಗಿ ಮೂವರನ್ನೂ ಪಾಕಿಸ್ತಾನದಲ್ಲಿರುವ ಹಿಜ್ಬುಲ ಮುಜಾಹಿದೀನ ನೆಲೆಯಲ್ಲಿ ತರಬೇತಿಯನ್ನು ನೀಡಲಾಗಿತ್ತು. ಮೂವರ ವಿಚಾರಣೆ ಮುಂದುವರಿದೆ.
ಸಂಪಾದಕೀಯ ನಿಲುವುಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನ ಮಾಡುವ ಪಾಕಿಸ್ತಾನಕ್ಕೆ ಭಾರತವು ಯಾವಾಗ ಪಾಠ ಕಲಿಸುವುದು ? |
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!