|

ಮಹಾರಾಜಗಂಜ (ಉತ್ತರಪ್ರದೇಶ) – ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಇಲ್ಲಿಂದ 3 ಜಿಹಾದಿ ಭಯೋತ್ಪಾದಕರನ್ನು ಬಂಧಿಸಿದೆ. ಇವರಲ್ಲಿ 2 ಪಾಕಿಸ್ತಾನಿಗಳು ಮತ್ತು ಒಬ್ಬ ಕಾಶ್ಮೀರದವನಾಗಿದ್ದಾನೆ. ಈ ಮೂವರು ನೇಪಾಳದಿಂದ ಭಾರತದಲ್ಲಿ ನುಸುಳುತ್ತಿರುವಾಗ ಬಂಧಿಸಲಾಯಿತು. ಈ ಮೂವರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ.ನ ನೆರವಿನೊಂದಿಗೆ ಭಯೋತ್ಪಾದಕ ಸಂಘಟನೆ ಹಿಜ್ಬುಲ ಮುಜಾಹಿದ್ದೀನನಿಂದ ಭಯೋತ್ಪಾದಕ ಚಟುವಟಿಕೆಯ ತರಬೇತಿ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ಅವರ ಬಂಧನದ ಬಳಿಕ ಭಾರತ ಮತ್ತು ನೇಪಾಳ ಗಡಿಯಲ್ಲಿ ತೀವ್ರ ನಿಗಾ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ. ಈ ವಿಷಯದಲ್ಲಿ ಪೊಲೀಸರು ಮಾತನಾಡಿ, ಕಳೆದ ಕೆಲವು ತಿಂಗಳುಗಳಿಂದ ಐ.ಎಸ್.ಐ. ಪಾಕಿಸ್ತಾನಿ ನಾಗರಿಕರು ಸೇರಿದಂತೆ ಇತರ ಕೆಲವು ಭಯೋತ್ಪಾದಕರನ್ನು ಭಾರತಕ್ಕೆ ಕಳುಹಿಸುವ ಸಿದ್ಧತೆಯಲ್ಲಿರುವ ಬಗ್ಗೆ ಮಾಹಿತಿ ದೊರಕಿತ್ತು. ಚುನಾವಣೆ ವೇಳೆ ಈ ಭಯೋತ್ಪಾದಕರು ರಕ್ತಪಾತ ನಡೆಸಬಹುದು ಎಂಬ ಮಾಹಿತಿ ಇತ್ತು. ಇದಕ್ಕಾಗಿ ಮೂವರನ್ನೂ ಪಾಕಿಸ್ತಾನದಲ್ಲಿರುವ ಹಿಜ್ಬುಲ ಮುಜಾಹಿದೀನ ನೆಲೆಯಲ್ಲಿ ತರಬೇತಿಯನ್ನು ನೀಡಲಾಗಿತ್ತು. ಮೂವರ ವಿಚಾರಣೆ ಮುಂದುವರಿದೆ.
ಸಂಪಾದಕೀಯ ನಿಲುವುಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನ ಮಾಡುವ ಪಾಕಿಸ್ತಾನಕ್ಕೆ ಭಾರತವು ಯಾವಾಗ ಪಾಠ ಕಲಿಸುವುದು ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ