|

ಮಹಾರಾಜಗಂಜ (ಉತ್ತರಪ್ರದೇಶ) – ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಇಲ್ಲಿಂದ 3 ಜಿಹಾದಿ ಭಯೋತ್ಪಾದಕರನ್ನು ಬಂಧಿಸಿದೆ. ಇವರಲ್ಲಿ 2 ಪಾಕಿಸ್ತಾನಿಗಳು ಮತ್ತು ಒಬ್ಬ ಕಾಶ್ಮೀರದವನಾಗಿದ್ದಾನೆ. ಈ ಮೂವರು ನೇಪಾಳದಿಂದ ಭಾರತದಲ್ಲಿ ನುಸುಳುತ್ತಿರುವಾಗ ಬಂಧಿಸಲಾಯಿತು. ಈ ಮೂವರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ.ನ ನೆರವಿನೊಂದಿಗೆ ಭಯೋತ್ಪಾದಕ ಸಂಘಟನೆ ಹಿಜ್ಬುಲ ಮುಜಾಹಿದ್ದೀನನಿಂದ ಭಯೋತ್ಪಾದಕ ಚಟುವಟಿಕೆಯ ತರಬೇತಿ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ಅವರ ಬಂಧನದ ಬಳಿಕ ಭಾರತ ಮತ್ತು ನೇಪಾಳ ಗಡಿಯಲ್ಲಿ ತೀವ್ರ ನಿಗಾ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ. ಈ ವಿಷಯದಲ್ಲಿ ಪೊಲೀಸರು ಮಾತನಾಡಿ, ಕಳೆದ ಕೆಲವು ತಿಂಗಳುಗಳಿಂದ ಐ.ಎಸ್.ಐ. ಪಾಕಿಸ್ತಾನಿ ನಾಗರಿಕರು ಸೇರಿದಂತೆ ಇತರ ಕೆಲವು ಭಯೋತ್ಪಾದಕರನ್ನು ಭಾರತಕ್ಕೆ ಕಳುಹಿಸುವ ಸಿದ್ಧತೆಯಲ್ಲಿರುವ ಬಗ್ಗೆ ಮಾಹಿತಿ ದೊರಕಿತ್ತು. ಚುನಾವಣೆ ವೇಳೆ ಈ ಭಯೋತ್ಪಾದಕರು ರಕ್ತಪಾತ ನಡೆಸಬಹುದು ಎಂಬ ಮಾಹಿತಿ ಇತ್ತು. ಇದಕ್ಕಾಗಿ ಮೂವರನ್ನೂ ಪಾಕಿಸ್ತಾನದಲ್ಲಿರುವ ಹಿಜ್ಬುಲ ಮುಜಾಹಿದೀನ ನೆಲೆಯಲ್ಲಿ ತರಬೇತಿಯನ್ನು ನೀಡಲಾಗಿತ್ತು. ಮೂವರ ವಿಚಾರಣೆ ಮುಂದುವರಿದೆ.
ಸಂಪಾದಕೀಯ ನಿಲುವುಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನ ಮಾಡುವ ಪಾಕಿಸ್ತಾನಕ್ಕೆ ಭಾರತವು ಯಾವಾಗ ಪಾಠ ಕಲಿಸುವುದು ? |
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !