ಸೀತಾ ಮಾತೆ ಮತ್ತು ಶ್ರೀ ಹನುಮಾನ್ ಇವರನ್ನು ಅವಮಾನಿಸುವ ನಾಟಕ ಪ್ರದರ್ಶಿಸಿದ ಪ್ರಕರಣ

ಪುದ್ದುಚೆರಿ – ಪುದ್ದುಚೆರಿ ಕಾಲೇಜಿನಲ್ಲಿ ಕೆಲ ದಿನಗಳ ಹಿಂದೆ ಪ್ರದರ್ಶನಗೊಂಡಿದ್ದ ಹಿಂದೂ ವಿರೋಧಿ ‘ಸೋಮಯಾನಂ’ ನಾಟಕದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಪ್ರದರ್ಶನ ಕಲಾ ವಿಭಾಗದ’ ಮುಖ್ಯಸ್ಥರನ್ನು ಹುದ್ದೆಯಿಂದ ವಜಾಗೊಳಿಸಿದೆ. ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ ‘ಇಜಿನಿ 2014’ ರ ಸಂದರ್ಭದಲ್ಲಿ ಈ ನಾಟಕವನ್ನು ಪ್ರದರ್ಶಿಸಲಾಯಿತು. ಅದರಲ್ಲಿ ಸೀತಾಮಾತೆ ಮತ್ತು ಶ್ರೀ ಹನುಮಾನ್ ಇವರ ಅವಮಾನ ಮಾಡಲಾಗಿತ್ತು. ಇದರ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಸ್ತೆಗಿಳಿದು ತೀವ್ರ ಪ್ರತಿಭಟನೆ ನಡೆಸಿತು. ಈ ನಾಟಕದ ವಿರುದ್ಧ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ. ಪೊಲೀಸರು ಈ ನಾಟಕದ ನಿರ್ದೇಶಕ ಮತ್ತು ಚಿತ್ರಕಥೆಗಾರ ಲೇಖಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕಾಲೇಜಿನ ಸಹಾಯಕ ಕುಲಸಚಿವ ಡಿ. ನಂದಗೋಪಾಲ್ ಮಾತನಾಡಿ, ‘ಕಾಲೇಜಿನಲ್ಲಿ ಶಾಂತಿಯುತ ಹಾಗೂ ಭ್ರಾತೃತ್ವದ ವಾತಾವರಣ ನಿರ್ಮಿಸಲು ನಾವು ಕಟಿ ಬದ್ಧರಾಗಿದ್ದೇವೆ. ಕಾಲೇಜಿನ ಪರಿಸರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಕೃತ್ಯಮುಚ್ಚಿಡುವುದನ್ನು ನಾವು ಸಹಿಸುವುದಿಲ್ಲ,” ಎಂದು ಸ್ಪಷ್ಟಪಡಿಸಿದರು.
Sita offers beef to Ravana, dances with him: Play insulting Hindu deities staged at Pondicherry University, ABVP launches protesthttps://t.co/1saStYNJfV
— OpIndia.com (@OpIndia_com) April 1, 2024
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ