
ಲೇಹ (ಲಡಾಖ್) – ಸೋನಮ್ ವಾಂಗಚುಕ ಇವರ ನೇತೃತ್ವದಲ್ಲಿ ಏಪ್ರಿಲ್ 7 ರಂದು ಆಯೋಜಿಸಲಾಗಿದ್ದ ಮೆರವಣಿಗೆಯನ್ನು ರದ್ದುಗೊಳಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವದಕ್ಕಾಗಿ ಜಾರಿ ಸಂಸ್ಥೆಗಳೊಂದಿಗೆ ಯಾವುದೇ ರೀತಿಯ ಘರ್ಷಣೆಯನ್ನು ತಪ್ಪಿಸಲು ಈ ಮೆರವಣಿಗೆಯನ್ನು ರದ್ದು ಗೊಳಿಸಲಾಗಿದೆ ಎಂದು ಹೇಳಲಾಗಿದೆ. ಚೀನಾವು ಲಡಾಖ್ ಮೇಲೆ ಮಾಡಿದ ಆಕ್ರಮಣದ ಬಗ್ಗೆ ಗಮನ ಸೆಳೆಯಲು ಈ ಮೆರವಣಿಗೆಯನ್ನು ವಾಸ್ತವಿಕ ನಿಯಂತ್ರಣ ರೇಖೆಯವರೆಗೆ (ಗಡಿರೇಖೆಯ) ಹೋಗುವುದಿತ್ತು.
ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ, ಪರಿಸರವಾದಿ ಸೋನಮ್ ವಾಂಗ್ಚುಕ್ ಇವರು ಮಾತನಾಡಿ, ದಕ್ಷಿಣ ಲಡಾಖ್ನಲ್ಲಿ ಬೃಹತ್ ಕೈಗಾರಿಕಾ ಕಾರ್ಖಾನೆಗಳಿಂದ ಭೂಮಿ ಕಳೆದುಕೊಂಡಿರುವ ರೈತರ ಸಂಕಷ್ಟದ ಬಗ್ಗೆ ಮತ್ತು ಉತ್ತರ ಲಡಾಖ್ ನಲ್ಲಿ ಚೀನಾದ ಆಕ್ರಮಣದ ಬಗ್ಗೆ ದೇಶಾದ್ಯಂತ ಜಾಗೃತಿ ಮೂಡಿಸುವ ನಮ್ಮ ಗುರಿಯನ್ನು(ಧ್ಯೇಯವನ್ನು) ನಾವು ಈಗಾಗಲೇ ಸಾಧಿಸಿದ್ದೇವೆ. ನಮಗೆ ರಾಷ್ಟ್ರೀಯ ಭದ್ರತೆ ಮತ್ತು ಶಾಂತಿಯುತ ವಾತಾವರಣದ ಬಗ್ಗೆ ಚಿಂತೆ ಇದೆ. ಆದ್ದರಿಂದ, ಸಾರ್ವಜನಿಕ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಮತ್ತು ಕಾನೂನು ಮತ್ತು ಸುವ್ಯವಸ್ಥೆ ಜಾರಿ ಸಂಸ್ಥೆಗಳೊಂದಿಗೆ ಯಾವುದೇ ಘರ್ಷಣೆಯನ್ನು ತಪ್ಪಿಸಲು, ನಾವು ಉದ್ದೇಶಿತ ಮೆರವಣಿಗೆಯನ್ನು ಸ್ಥಗಿತಗೊಳಿಸುತ್ತಿದ್ದೇವೆ ಎಂದರು.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!