ಕನ್ಹಯ್ಯಾಲಾಲ ಹತ್ಯೆ ಪ್ರಕರಣದ ಉಲ್ಲೇಖವಿಲ್ಲದ ಕಾರಣ, ಅರ್ಜಿ ಸಲ್ಲಿಸಿದ ಮುಸ್ಲಿಂ ನ್ಯಾಯವಾದಿಗಳಿಗೆ ನ್ಯಾಯಾಲಯದಿಂದ ಛೀಮಾರಿ !

ನವದೆಹಲಿ – ಗುಂಪಿನಿಂದ ನಡೆಯುವ ಅಲ್ಪಸಂಖ್ಯಾತ ಸಮುದಾಯ ವ್ಯಕ್ತಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾದ ಒಂದು ಅರ್ಜಿಯ ವಿಚಾರಣೆ ವೇಳೆಗೆ ನ್ಯಾಯವಾದಿ ಸಲೀಂ ಪಾಷಾ ಅವರಿಗೆ ಛೀಮಾರಿ ಹಾಕಿದೆ. ಈ ಅರ್ಜಿಯಲ್ಲಿ ಉದಯಪುರದ ದರ್ಜಿ ಕನ್ಹಯ್ಯಾಲಾಲ್ ಹತ್ಯೆಯನ್ನು ಉಲ್ಲೇಖಿಸಿರಲಿಲ್ಲ. ಅದರಿಂದ ನ್ಯಾಯಾಲಯವು ಸಲೀಂ ಪಾಷಾ ಅವರಿಗೆ ಛೀಮಾರಿ ಹಾಕುವಾಗ ‘ಇಂತಹ ಪ್ರಕರಣಗಳಲ್ಲಿ ಪಕ್ಷಪಾತ ಮಾಡಬೇಡಿ; ಏಕೆಂದರೆ ಈ ಪ್ರಕರಣ ಎಲ್ಲ ರಾಜ್ಯಗಳಿಗೂ ಸಂಬಂಧಿಸಿದೆ. ಇಂತಹ ಘಟನೆಗಳನ್ನು ಧರ್ಮದ ಆಧಾರದಲ್ಲಿ ನೋಡಬೇಡಿ ಎಂದು ಹೇಳಿದೆ.
ಕಳೆದ ವರ್ಷ ‘ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್’ ಸಂಸ್ಥೆಯು ಈ ಅರ್ಜಿಯನ್ನು ಸಲ್ಲಿಸಿತ್ತು. ಗುಂಪಿನಿಂದ ಹತ್ಯೆಗೊಂಡವರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಗಿದೆ. ಗುಂಪಿನ ಹತ್ಯೆ ಪ್ರಕರಣಗಳ ಬಗ್ಗೆ ಕೈಕೊಂಡ ಕ್ರಮಗಳ ಕುರಿತು ಆರು ವಾರಗಳಲ್ಲಿ ಅನೇಕ ರಾಜ್ಯಗಳಿಂದ ಉತ್ತರವನ್ನು ಕೋರಿದೆ. ನ್ಯಾಯಾಲಯದ ಬೇಸಿಗೆ ರಜೆಯ ನಂತರ ಈ ಬಗ್ಗೆ ಮುಂದಿನ ವಿಚಾರಣೆ ನಡೆಯಲಿದೆ.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್