Terrorist Attack : ಮಣಿಪುರದಲ್ಲಿ ಕ್ರೈಸ್ತ ಕುಕಿ ಭಯೋತ್ಪಾದಕರ ದಾಳಿಯಲ್ಲಿ ಇಬ್ಬರು ಯೋಧರ ವೀರಮರಣ

ಇಂಫಾಲ (ಮಣಿಪುರ) – ಮಣಿಪುರದಲ್ಲಿ, ಬಿಷ್ಣುಪುರ ಜಿಲ್ಲೆಯ ನರನಸೇನಾ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಕ್ರೈಸ್ತ ಕುಕಿ ಸಮುದಾಯಕ್ಕೆ ಸೇರಿದ ಉಗ್ರರು ಮಧ್ಯರಾತ್ರಿಯಲ್ಲಿ ದಾಳಿ ನಡೆಸಿದ್ದಾರೆ. ಏಪ್ರಿಲ್ 19 ರಂದು ಬಿಷ್ಣುಪುರದಲ್ಲಿ ಮೊದಲ ಹಂತದ ಮತದಾನದ ವೇಳೆಯೂ ಹಿಂಸಾಚಾರ ನಡೆದಿತ್ತು. ಇದರಲ್ಲಿ 3 ಜನರು ಗಾಯಗೊಂಡಿದ್ದರು.