
ಚೆನ್ನೈ – ತಮಿಳುನಾಡಿನಲ್ಲಿ ಚುನಾವಣಾ ಆಯೋಗ ಮತ್ತು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಒಂದು ಸಾವಿರದ 309 ಕೋಟಿ 52 ಲಕ್ಷ ರೂಪಾಯಿ ನಗದು, ಮದ್ಯ, ಚಿನ್ನ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16ರಿಂದ ನೀತಿ ಸಂಹಿತೆ ಜಾರಿಯಾಗಿದೆ. ಒಟ್ಟು ಮೊತ್ತದಲ್ಲಿ 179 ಕೋಟಿ 91 ಲಕ್ಷ ಕೋಟಿ ರೂಪಾಯಿ ನಗದು ಮತ್ತು 1 ಸಾವಿರದ 83 ಕೋಟಿ 78 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಇತರ ಅಮೂಲ್ಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಮಿಳುನಾಡಿನ ಮುಖ್ಯ ಚುನಾವಣಾಧಿಕಾರಿ ಸತ್ಯಬ್ರತ ಸಾಹು ತಿಳಿಸಿದ್ದಾರೆ. ಇದರೊಂದಿಗೆ 8 ಕೋಟಿ 65 ಲಕ್ಷ ರೂಪಾಯಿ ಮೌಲ್ಯದ ಮದ್ಯ, 1 ಕೋಟಿ, 36 ಲಕ್ಷ ರೂಪಾಯಿ ಮೌಲ್ಯದ ಅಮಲು ಪದಾರ್ಥ ಮತ್ತು 35 ಕೋಟಿ 8 ಲಕ್ಷ ರೂಪಾಯಿ ಬೆಲೆ ಬಾಳುವ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತೆಲಂಗಾಣದಲ್ಲಿ 202 ಕೋಟಿ ಮೌಲ್ಯದ ವಸ್ತು ವಶಕ್ಕೆ
ತೆಲಂಗಾಣದಲ್ಲಿ ಇದುವರೆಗೆ 202 ಕೋಟಿ 52 ಲಕ್ಷ ರೂಪಾಯಿ ಮೌಲ್ಯದ ನಗದು, ಮದ್ಯ, ಚಿನ್ನ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಒಟ್ಟು ಮೊತ್ತದಲ್ಲಿ 76 ಕೋಟಿ 65 ಲಕ್ಷ ರೂಪಾಯಿ ನಗದು, 29 ಕೋಟಿ 62 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತು ಇತರ ಅಮೂಲ್ಯ ವಸ್ತುಗಳು ಸೇರಿವೆ. ಮುಖ್ಯ ಚುನಾವಣಾಧಿಕಾರಿ ಹೇಳಿಕೆ ಪ್ರಕಾರ, ಇದರೊಂದಿಗೆ 43 ಕೋಟಿ 57 ಲಕ್ಷ ರೂಪಾಯಿ ಮೌಲ್ಯದ ಮದ್ಯ, 26 ಕೋಟಿ 12 ಲಕ್ಷ ರೂಪಾಯಿ ಮೌಲ್ಯದ ಮಾದಕ ಪದಾರ್ಥ ಮತ್ತು 26 ಕೋಟಿ 54 ಲಕ್ಷ ರೂಪಾಯಿ ಮೌಲ್ಯದ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!