ಕರ್ನಾಟಕದ ಕಾಂಗ್ರೆಸ್ ಶಾಸಕ ರಾಜು ಕಾಗೆ ಆಕ್ರೋಶದ ಹೇಳಿಕೆ

ಬೆಳಗಾವಿ – ಕಾಂಗ್ರೆಸ ಶಾಸಕ ರಾಜು ಕಾಗೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ತೀವ್ರ ಆಕ್ರೋಶದ ಹೇಳಿಕೆ ನೀಡಿದ್ದಾರೆ. ಮೋದಿಯವರ ಹುರಿದುಂಬಿಸುವ ಜಯಘೋಷ ಮಾಡುವ ಯುವಕರನ್ನು ಟೀಕಿಸಿದ ಕಾಗೆಯವರು, ನಾನು ಪದವೀಧರನಾಗಿದ್ದು ನನಗೆ ಬುದ್ಧಿಯಿದೆ. ನಾನು ಅನಕ್ಷರಸ್ಥನಲ್ಲ. ನಾನೂ ಕೂಡ ದೇಶವನ್ನು ನಡೆಸಬಲ್ಲೆ ಎಂಬ ವಿಶ್ವಾಸ ನನಗಿದೆ. ನಾಳೆ ಪ್ರಧಾನಮಂತ್ರಿ ಸತ್ತರೆ ಯಾರೂ ಪ್ರಧಾನಮಂತ್ರಿ ಆಗುವುದಿಲ್ಲವೇ? ಈ ದೇಶದಲ್ಲಿ 140 ಕೋಟಿ ಜನಸಂಖ್ಯೆ ಇದೆ. ಇಷ್ಟೊಂದು ಜನರಲ್ಲಿ ಪ್ರಧಾನಮಂತ್ರಿಯಾಗಬಲ್ಲ ಒಬ್ಬನೇ ಒಬ್ಬ ವ್ಯಕ್ತಿ ಕೂಡ ಇಲ್ಲವೇ ? ಎಂದು ಖಾರವಾಗಿ ನುಡಿದರು.
ಶಾಸಕ ಕಾಗೆ ಅವರ ಈ ಟೀಕೆಗೆ ಬಿಜೆಪಿ ಖಾರವಾಗಿ ಪ್ರತಿಕ್ರಿಯಿಸಿದೆ. ‘ಕಾಂಗ್ರೆಸ್ ನಾಯಕರು ಪ್ರಧಾನಮಂತ್ರಿ ಸಾವಿಗೆ ಕಾಯುತ್ತಿದ್ದಾರೆಯೇ?’ ಎಂದು ಬಿಜೆಪಿ ‘ಎಕ್ಸ್’ ಮಾಧ್ಯಮದಲ್ಲಿ ಪ್ರಶ್ನೆ ಕೇಳಿದೆ. ಕೆಲವು ದಿನಗಳ ಹಿಂದೆ ಕೂಡ ಕಾಗೆಯವರು ಪ್ರಧಾನಮಂತ್ರಿಯವರ ಜೀವನಶೈಲಿಯನ್ನು ಟೀಕಿಸಿ, ಪ್ರಧಾನಿಯವರು ದುಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಾರೆ. ಅವರ ಬಟ್ಟೆ ಬೆಲೆ 4 ಲಕ್ಷ ರೂಪಾಯಿಗಳಾಗಿರುತ್ತವೆ ಎಂದು ಹೇಳಿದ್ದರು. ವಿಶೇಷವೆಂದರೆ ಕಾಗೆಯವರು ಮೊದಲು ಬಿಜೆಪಿಯಲ್ಲಿದ್ದರು 2019 ರಲ್ಲಿ ಕಾಂಗ್ರೆಸ್ ಸೇರಿದ್ದರು.
ಸಂಪಾದಕೀಯ ನಿಲುವುಇಂತಹ ಹೇಳಿಕೆಯು ಕಾಂಗ್ರೆಸ್ ನಾಯಕರ ಮನೋವೃತ್ತಿಯನ್ನು ಎತ್ತಿ ತೋರಿಸುತ್ತದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!