
ಬೆಂಗಳೂರು (ಕರ್ನಾಟಕ) – ಹಣದ ವಿಚಾರವಾಗಿ ದೂರು ನೀಡಲು ಬಂದಿದ್ದ ಮಹಿಳೆಯರ ಗುಂಪೊಂದು ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ಇತರ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಮಹಿಳೆಯರನ್ನು ಬಂಧಿಸಲಾಗಿದೆ. ಆಯೇಶಾ ತಾಜ್, ಫೌಜಿಯಾ ಮತ್ತು ಅರ್ಬಿನ್ ತಾಜ್ ಬಂಧಿತ ಮಹಿಳೆಯರಾಗಿದ್ದಾರೆ.
ಹಣದ ವಿಚಾರವಾಗಿ ಮಹಿಳೆ ಮತ್ತು ಶೋಯೆಬ್ ಎಂಬವನ ನಡುವೆ ವಾದ ನಡೆದಿತ್ತು. ಈ ಬಗ್ಗೆ ದೂರು ನೀಡಲು ಮಹಿಳೆಯರು ನಾಸಿರ್ ಎಂಬವನ ಜೊತೆ ಠಾಣೆಗೆ ಬಂದಿದ್ದಳು; ಆದರೆ ದೂರು ದಾಖಲಿಸಿಕೊಳ್ಳದಿದ್ದರಿಂದ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಲು ಶುರುಮಾಡಿದರು. ಇದರಿಂದ ಅಸಮಾಧಾನಗೊಂಡ ಸಬ್ ಇನ್ಸ್ ಪೆಕ್ಟರ್ ಸುರೇಖಾ, ‘ದೂರು ಕೊಡುವುದಾದರೆ ಕೊಡಿ, ಇಲ್ಲವಾದರೆ ಹೊರಟು ಹೋಗಿ’ ಎಂದಿದ್ದಾರೆ. ಆ ನಂತರ ಅವರ ನಡುವೆ ವಾಗ್ವಾದ ನಡೆದಿದ್ದು ಮಹಿಳೆಯರು ಸೇರಿ ಸುರೇಖಾ ಅವರನ್ನು ಥಳಿಸಿದ್ದಲ್ಲದೇ ಇತರ ಪೊಲೀಸರ ಮೇಲೂ ಕೈ ಮಾಡಿದ್ದಾರೆ. ಘಟನೆಯ ಬಳಿಕ ಮೂವರನ್ನು ಬಂಧಿಸಲಾಗಿದೆ. ಬಂಧಿತರು ತಮ್ಮ ಹೆಸರು ಮತ್ತು ವಿಳಾಸವನ್ನು ತಪ್ಪಾಗಿ ಹೇಳಿದ್ದರು. ಅವರ ಆಧಾರ್ ಕಾರ್ಡ್ ಪರಿಶೀಲಿಸಿದಾಗ ನಿಜವಾದ ಹೆಸರು ಬೆಳಕಿಗೆ ಬಂದಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!