
ಇಂದೂರು (ತೆಲಂಗಾಣ) – ಕಾಂಗ್ರೆಸ್ಸಿನ ಹಿರಿಯ ನಾಯಕ ಮತ್ತು ಇಂದೂರು (ನಿಜಾಮಾಬಾದ) ಲೋಕಸಭಾ ಮತದಾರ ಕೇಂದ್ರದಲ್ಲಿನ ಕಾಂಗ್ರೆಸ್ ಅಭ್ಯರ್ಥಿ ತಾತಿಪಾರ್ಥಿ ಜೀವನ ರೆಡ್ಡಿ ಇವರು ಇಲ್ಲಿಯ ಓರ್ವ ಮಹಿಳೆಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ಬೆಳಕಿಗೆ ಬಂದಿದೆ. ಈ ಮಹಿಳೆ ಲೋಕಸಭಾ ಚುನಾವಣೆಯಲ್ಲಿ ಕಮಲಕ್ಕೆ ವೋಟು ನೀಡುವೆನು ಎಂದು ಹೇಳಿರುವುದರಿಂದ ರೆಡ್ಡಿ ಇವರಿಗೆ ಸಿಟ್ಟು ತಡೆಯಲಾಗದೆ ಮಹಿಳೆಯ ಕಪಾಳಕ್ಕೆ ಹೊಡೆದರು.
ಈ ಘಟನೆ ಅರಮೂರ ವಿಧಾನಸಭಾ ಮತದಾರ ಕೇಂದ್ರದಲ್ಲಿನ ಒಂದು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿ ರೆಡ್ಡಿ ಇವರು ಇತರ ನಾಯಕರ ಜೊತೆಗೆ ಪ್ರಚಾರ ನಡೆಸುತ್ತಿದ್ದರು. ವಿಶೇಷ ಎಂದರೆ ಇತ್ತೀಚಿಗೆ ನಡೆದಿರುವ ವಿಧಾನಸಭಾ ಚುನಾವಣೆಯಲ್ಲಿ ಈ ಮಹಿಳೆ ಕಾಂಗ್ರೆಸ್ಸಿಗೆ ಮತ ನೀಡಿದ್ದರು ಎಂದು ಹೇಳಲಾಗಿದೆ. ಈಗ ನಿವೃತ್ತಿ ವೇತನದ ಲಾಭ ದೊರೆಯುತ್ತಿಲ್ಲ ಎಂದು ಆರೋಪಿಸಿ ಅವರು ಕಾಂಗ್ರೆಸ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಆ ಸಮಯದಲ್ಲಿ ಮೇಲಿನ ಘಟನೆ ನಡೆದಿದೆ. ಚುನಾವಣೆಗಾಗಿ ಕಾಂಗ್ರೆಸ್ ನಿಂದ ರೆಡ್ಡಿಯವರು ಭಾಜಪದ ವರ್ತಮಾನ ಸಾಂಸದ ಧರ್ಮಪುರಿ ಅರವಿಂದ ಇವರ ವಿರುದ್ಧ ಸ್ಪರ್ಧಿಸಿದ್ದಾರೆ.
ಸಂಪಾದಕೀಯ ನಿಲುವುಕಾಂಗ್ರೆಸ್ಸಿನ ಮಹಿಳಾ ವಿರೋಧಿ ಮತ್ತು ಜನದ್ರೋಹಿ ಮುಖವಾಡ ತಿಳಿಯಿರಿ ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ