ರಾಮರಾಜ್ಯಕ್ಕಾಗಿ ಆಧ್ಯಾತ್ಮಿಕ ಬಲ ಪಡೆಯಲು ಹಿಂದೂ ಜನಜಾಗೃತಿ ಸಮಿತಿ ಮತ್ತು ಸಮವಿಚಾರಿ ಸಂಘಟನೆಗಳಿಂದ ಪ್ರಯತ್ನ

ಬೆಂಗಳೂರು – ಶ್ರೀ ಹನುಮಂತ ಜಯಂತಿಯ ನಿಮಿತ್ತ ‘ಗದಾ ಪೂಜೆ’ಯ ಮಾಧ್ಯಮದಿಂದ ಹಿಂದೂಗಳಲ್ಲಿ ಶೌರ್ಯ ಜಾಗೃತಗೊಳಿಸಲು ಹಾಗೂ ರಾಮರಾಜ್ಯದ ಕಾರ್ಯಕ್ಕಾಗಿ ಆಧ್ಯಾತ್ಮಿಕ ಬಲಪ್ರಾಪ್ತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮವಿಚಾರಿ ಹಿಂದುತ್ವವಾದಿ ಸಂಘಟನೆಗಳಿಂದ ದೇಶದಾದ್ಯಂತ ೮೭೦ ಕಡೆಗಳಲ್ಲಿ ಸಾಮೂಹಿಕ ‘ಗದಾಪೂಜೆ’ಯನ್ನು ಆಯೋಜಿಸಲಾಗಿತ್ತು. ಈ ಸಮಯದಲ್ಲಿ ರಾಮರಾಜ್ಯದ ಸ್ಥಾಪನೆಗಾಗಿ ಸಾಮೂಹಿಕ ಪ್ರತಿಜ್ಞೆ ಮಾಡಲಾಯಿತು. ಕರ್ನಾಟಕದ ಬಾಗಲಕೋಟೆ, ಬೆಳಗಾವಿ ಧಾರವಾಡ, ಶಿವಮೊಗ್ಗ, ಮಂಗಳೂರು ಮತ್ತು ಬೆಂಗಳೂರು ಸೇರಿದಂತೆ ೪೦ ಕ್ಕೂ ಹೆಚ್ಚಿನ ಕಡೆಗಳಲ್ಲಿ ಗದಾಪೂಜೆ ನೆರವೇರಿತು.

ರಾಮರಾಜ್ಯದ ಸ್ಥಾಪನೆಗಾಗಿ ಹಿಂದೂಗಳು ಹನುಮಂತನಂತೆ ಭಕ್ತಿ ಮತ್ತು ಶೌರ್ಯವನ್ನು ಹೆಚ್ಚಿಸುವುದು ಆವಶ್ಯಕ ! – ಶ್ರೀ. ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ

ಹನುಮಂತನು ದೈವೀ ಗದೆಯಿಂದ ಶಕ್ತಿಶಾಲಿ ಅಸುರರು ಮತ್ತು ರಾಕ್ಷಸರನ್ನು ಸಂಹರಿಸಿ ಶ್ರೀರಾಮಚಂದ್ರರ ರಾಮರಾಜ್ಯಕ್ಕಾಗಿ ದೊಡ್ಡ ಕೊಡುಗೆಯನ್ನು ನೀಡಿದನ. ಮಹಾಭಾರತದ ಯುದ್ಧದಲ್ಲಿಯೂ ಮಾರುತಿಯು ಅರ್ಜುನನ ರಥದ ಮೇಲೆ ಕುಳಿತು ಪಾಂಡವರಿಗೆ ಧರ್ಮಯುದ್ಧವನ್ನು ಗೆಲ್ಲಲು ದೈವೀ ಸಹಾಯ ಮಾಡಿದ್ದರು. ಛತ್ರಪತಿ ಶಿವಾಜಿ ಮಹಾರಾಜರ ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿಯೂ ಸಮರ್ಥ ರಾಮದಾಸ ಸ್ವಾಮಿಗಳು ಮಾರುತಿಯ ಮೂರ್ತಿಯನ್ನು ೧೧ ಕಡೆ ಸ್ಥಾಪಿಸಿ ಮಾವಳೆಯರಿಗೆ (ಶಿವಾಜಿ ಮಹಾರಾಜರ ಸೈನಿಕರಿಗೆ) ಬಲಪ್ರಾಪ್ತಿ ಮಾಡಿಕೊಟ್ಟಿದ್ದರು. ಈಗ ಪುನಃ ೫೦೦ ವರ್ಷಗಳ ನಂತರ ಇನ್ನೊಮ್ಮೆ ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ (ಶ್ರೀರಾಮನ ಬಾಲಕರೂಪ) ವಿರಾಜ ಮಾನರಾಗಿದ್ದಾರೆ. ಇಂತಹ ಸಮಯದಲ್ಲಿ ನಾವು ಪುನಃ ರಾಮರಾಜ್ಯವನ್ನು ಸ್ಥಾಪಿಸಲು ಮಾರುತಿಯಂತಹ ಭಕ್ತಿ ಹಾಗೂ ಶೂರತ್ವವು ಅತ್ಯಂತ ಅವಶ್ಯಕವಾಗಿದೆ. ಈ ಉದ್ದೇಶವನ್ನು ಗಮನದಲ್ಲಿಟ್ಟು ಶ್ರೀ ಹನುಮಾನ ಜಯಂತಿಯ ಮಂಗಳ ದಿನದಂದು ವಿವಿಧ ಕಡೆಗಳಲ್ಲಿ ಗದಾಪೂಜೆಯನ್ನು ಆಯೋಜಿಸಲಾಗಿತ್ತು.
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ಮುಂಬಯಿ ಲೋಕಲ್ ನಲ್ಲಿನ ಮತಾಂತರ ಮತ್ತು ಢೋಂಗಿತನದ ಹಿಂದೆ ಅಡಗಿರುವ ಗಂಡಾಂತರವನ್ನು ನಿಯಂತ್ರಿಸಲು ವಿಶೇಷ ನಿಯಮಾವಳಿ ಸಿದ್ಧಪಡಿಸಲಾಗುವುದು !
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಭಾರತದ ಮಹಾನ್ ಗಣಿತಜ್ಞ ‘ಆರ್ಯಭಟ’ ಅವರ ವಿಡಂಬನೆ; ಹಿಂದೂ ಜನಜಾಗೃತಿ ಸಮಿತಿಯಿಂದ ‘ಅಮೆಜಾನ್ ಇಂಡಿಯಾ’ಗೆ ಕಾನೂನು ನೋಟಿಸ್ !