ಗುರು ಗ್ರಂಥ ಸಾಹಿಬ್ ಹರಿದು ಹಾಕಿದ ಆರೋಪ !

ಚಂಡೀಗಢ – ಪಂಜಾಬನ ಫಿರೋಜಪುರದ ಬಾಬಾ ಬೀರ್ ಸಿಂಗ್ ಗುರುದ್ವಾರದಲ್ಲಿ ಇರಿಸಲಾಗಿದ್ದ ಗುರು ಗ್ರಂಥ ಸಾಹಿಬ್ನ ಕೆಲವು ಪುಟಗಳನ್ನು ಹರಿದು ಹಾಕಿದ್ದಕ್ಕಾಗಿ 19 ವರ್ಷದ ಬಕ್ಷೀಸ್ ಸಿಂಗ್ ಎಂಬ ಯುವಕನನ್ನು ಗುಂಪೊಂದು ಥಳಿಸಿದೆ. ಗುಂಪಿನಲ್ಲಿನ ಕೆಲವರು ಆರೋಪಿ ಯುವಕನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದರು. ಗಂಭೀರವಾಗಿ ಗಾಯಗೊಂಡ ಬಕ್ಷೀಸ್ ಸಿಂಗ್ ನನ್ನ ಪೊಲೀಸರು ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಯಲ್ಲಿ ಯುವಕ ಪ್ರಾಣಬಿಟ್ಟನು. ಬಾಲಕನ ಸಾವಿನ ನಂತರ ಆತನ ತಂದೆ ಲಖವಿಂದರ್ ಸಿಂಗ್ ಮಾತನಾಡಿ ‘ನನ್ನ ಮಗ ಮಾನಸಿಕ ಅಸ್ವಸ್ಥನಾಗಿದ್ದ. ಬಕ್ಷೀಸ್ ಸಿಂಗ್ ಹಂತಕರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಎಂದು ಆಗ್ರಹಿಸಿದರು. ಪೊಲೀಸ್ ಇಲಾಖೆ ಈ ಘಾಟ್ನಎಯ ತನಿಖೆ ನಡೆಸುತ್ತಿದೆ.
ಈ ಘಟನೆ ಬಗ್ಗೆ ಶಿರೋಮಣಿ ಗುರುದ್ವಾರ ನಿರ್ವಹಣಾ ಸಮಿತಿಯು (ಎಸ್. ಜಿ.ಪಿ.ಸಿ) ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಮೃತ ಯುವಕನ ಕುಟುಂಬದ ಮೇಲೆ ಸಾಮಾಜಿಕ ಮತ್ತು ಧಾರ್ಮಿಕ ಬಹಿಷ್ಕಾರವನ್ನು ಘೋಷಿಸಿದೆ. ಯಾವುದೇ ಗುರುದ್ವಾರದಲ್ಲಿ ಬಕ್ಷೀಸ್ ಸಿಂಗ್ ಅಂತ್ಯಸಂಸ್ಕಾರ ಮಾಡದಂತೆ ಎಸ್.ಜಿ.ಪಿ.ಸಿ ಆದೇಶ ಹೊರಡಿಸಿದೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ