ಮಲಪ್ಪುರಂ, ಕೋಳಿಕೋಡ್ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಎಚ್ಚರಿಕೆ

ನವದೆಹಲಿ – ರಾಜ್ಯದ 3 ಜಿಲ್ಲೆಗಳಲ್ಲಿ ‘ವೆಸ್ಟ ನೈಲ್’ ಜ್ವರ ಹರಡುವ ಕುರಿತು ರಾಜ್ಯ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಮಲಪ್ಪುರಂ, ಕೋಳಿಕೋಡ್ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಈ ಜ್ವರದ ಪ್ರಕರಣಗಳು ವರದಿಯಾಗಿದ್ದು, ಈ ಜ್ವರವನ್ನು ತಡೆಗಟ್ಟಲು ಮಾರ್ಗಸೂಚಿಗಳನ್ನು ಸಹ ಪ್ರಸಾರ ಮಾಡಲಾಗಿದೆ. ರಾಜ್ಯದ ಎಲ್ಲ ಸ್ಥಳೀಯ ಆಡಳಿತಗಳಿಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಇಲಾಖೆ ಸೂಚಿಸಿದೆ.
ಯಾರಿಗಾದರೂ ಈ ವೈರಾಣುವಿನ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಈ ವೈರಸ್ ಡೆಂಗ್ಯೂಗೆ ಹೋಲುತ್ತದೆ ಮತ್ತು ಭಯಪಡುವ ಅಗತ್ಯವಿಲ್ಲ. ಈವರೆಗೆ 5 ಪ್ರಕರಣಗಳು ವರದಿಯಾಗಿದ್ದು, ಅವರಲ್ಲಿ 4 ಮಂದಿ ಗುಣಮುಖರಾಗಿದ್ದಾರೆ.
ಏನಿದು ‘ವೆಸ್ಟ್ ನೈಲ್’ ಜ್ವರ ?
ಈ ರೋಗ ಸೊಳ್ಳೆಗಳಿಂದ ಹರಡುತ್ತದೆ. ಇದರ ಮುಖ್ಯ ಲಕ್ಷಣಗಳು ತಲೆನೋವು, ಜ್ವರ, ಸ್ನಾಯು ನೋವು, ತಲೆತಿರುಗುವಿಕೆ ಇತ್ಯಾದಿ. ಈ ಕಾಯಿಲೆಗೆ ಔಷಧಿ ಇಲ್ಲದ ಕಾರಣ ನಿಯಂತ್ರಣದಲ್ಲಿ ತರುವುದು ಸೂಕ್ತವಾಗಿದೆ. ಸಕಾಲದಲ್ಲಿ ಚಿಕಿತ್ಸೆ ನೀಡದಿದ್ದರೆ, ವ್ಯಕ್ತಿಯ ಮೆದುಳಿನ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಮತ್ತು ಅದು ಸಾವಿಗೆ ಕಾರಣವಾಗಬಹುದು.
West Nile fever: Kerala on alert, health department orders to ramp up pre-monsoon cleaning activities
Read @ANI Story | https://t.co/W6JYCC9ff6#WestNileFever #Kerala pic.twitter.com/FC7NpiYxtV
— ANI Digital (@ani_digital) May 8, 2024
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ