Pakistan Expresses Happiness: ‘ಕೇಜ್ರಿವಾಲ್ ಬಿಡುಗಡೆ ಭಾರತೀಯರಿಗೆ ಒಳ್ಳೆಯ ಸಂದೇಶವಂತೆ !’

ಕೇಜ್ರಿವಾಲ್‌ಗೆ ಜಾಮೀನು ಸಿಕ್ಕಿದ್ದರಿಂದ ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿಗೆ ಸಂತಸ !

ಇಸ್ಲಾಮಾಬಾದ್ (ಪಾಕಿಸ್ತಾನ) – ಮೋದಿ ಮತ್ತೊಂದು ಯುದ್ಧ ಸೋತರು. ಕೆಜರಿವಾಲ ಇವರ ಬಿಡುಗಡೆಯಾಗಿದ್ದೂ ಇದು ಎಲ್ಲ ಭಾರತೀಯರಿಗೆ ಒಳ್ಳೆಯ ವಾರ್ತೆಯಾಗಿದೆ, ಎಂದು ಪಾಕಿಸ್ತಾನದ ಮಾಜಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಫವಾದ್ ಚೌಧರಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಲಾದ ಮಧ್ಯಂತರ ಜಾಮೀನಿನ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಫವಾದ್ ಚೌಧರಿ ಅವರು ‘ಎಕ್ಸ್’ ನಲ್ಲಿ ವೀಡಿಯೊವನ್ನು ಹಂಚಿಕೊಂಡು ರಾಹುಲ್ ಗಾಂಧಿಯನ್ನು ಹೊಗಳಿದ್ದರು. ಇದನ್ನು ಟೀಕಿಸಿದ ಪ್ರಧಾನಿ ಮೋದಿ, ಭಾರತದಲ್ಲಿ ಕಾಂಗ್ರೆಸ್ ದುರ್ಬಲವಾಗುತ್ತಿರುವಾಗ ಪಾಕಿಸ್ತಾನದ ನಾಯಕರು ಕಾಂಗ್ರೆಸ್‌ಗಾಗಿ ಪ್ರಾರ್ಥಿಸುತ್ತಿದ್ದಾರೆ ಎಂದು ಪ್ರಚಾರ ಸಭೆಯಲ್ಲಿ ಹೇಳಿದ್ದರು. ಕಾಂಗ್ರೆಸ್ ದುರ್ಬಲವಾಗಿದೆ ಎಂದು ಪಾಕಿಸ್ತಾನಿಗಳು ಅಳುತ್ತಿದ್ದಾರೆ. ಪಾಕಿಸ್ತಾನ ಮತ್ತು ಕಾಂಗ್ರೆಸ್ ನಡುವಿನ ಸ್ನೇಹ ಬೆಳಕಿಗೆ ಬಂದಿದೆ ಎಂದಿದ್ದರು.

ಸಂಪಾದಕೀಯ ನಿಲುವು

ಭಾರತಕ್ಕೆ ಯಾವುದು ಒಳ್ಳೆಯದು ಮತ್ತು ಯಾವುದು ಕೆಟ್ಟದ್ದು ? ಈ ಬಗ್ಗೆ ಮಾತನಾಡುವುದಕ್ಕಿಂತ ಪಾಕಿಸ್ತಾನದ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ, ಇದರ ಬಗ್ಗೆ ಫವಾದ್ ಚೌಧರಿ ಮಾತನಾಡಬೇಕು !