
ಟೆಲ್ ಅವೀವ್ (ಇಸ್ರೇಲ್) – ದಕ್ಷಿಣ ಗಾಜಾದ ರಫಾಹ್ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಸೇವೆಯ ಸಂಯೋಜಕರಾದ ಕರ್ನಲ್ ವೈಭವ್ ಅನಿಲ್ ಕಾಳೆ ಸಾವನ್ನಪ್ಪಿದ್ದು ಇನ್ನೊಬ್ಬ ಯೋಧ ಗಾಯಗೊಂಡಿದ್ದಾರೆ. ಕರ್ನಲ್ ವೈಭವ್ ಕಾಳೆ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಆಗಿದ್ದು, ಅವರು 2022 ರಲ್ಲಿ ಭಾರತೀಯ ಸೇನೆಯಿಂದ ಅಕಾಲಿಕ ನಿವೃತ್ತಿ ಪಡೆದಿದ್ದರು ಎಂದು ತಿಳಿದು ಬಂದಿದೆ.

ವಿಶ್ವಸಂಸ್ಥೆಯ ಉಪ ವಕ್ತಾರ ಫರಹಾನ ಹಕ್ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯ ಪ್ರಕಾರ, 46 ವರ್ಷದ ವೈಭವ್ ಅನಿಲ್ ಕಾಳೆ ಅವರು ಒಂದು ತಿಂಗಳ ಹಿಂದೆ ಗಾಜಾದಲ್ಲಿ ‘ಯುನೈಟೆಡ್ ನೇಷನ್ಸ್ ಡಿಪಾರ್ಟ್ಮೆಂಟ್ ಆಫ್ ಸೇಪ್ಟಿ ಅಂಡ್ ಸೆಕ್ಯುರಿಟಿ'(ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತೆ ಇಲಾಖೆಗೆ) ಭದ್ರತಾ ಸೇವೆಗಳ ಸಂಯೋಜಕರಾಗಿ ಸೇರಿದ್ದರು. ಕರ್ನಲ್ ಕಾಳೆ ಅವರು ತಮ್ಮ ಸಹೋದ್ಯೋಗಿಯೊಂದಿಗೆ ವಾಹನದಲ್ಲಿ ರಫಾಹ ದಲ್ಲಿರುವ ಯುರೋಪಿಯನ್ ಆಸ್ಪತ್ರೆಗೆ ಹೋಗುತ್ತಿರುವಾಗ ಅವರ ಮೇಲೆ ದಾಳಿ ನಡೆದಿದೆ. ಸಂಯುಕ್ತ ರಾಷ್ಟ್ರದ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರು ಸಂಯುಕ್ತ ರಾಷ್ಟ್ರದ ಸಿಬ್ಬಂದಿ ಮೇಲಿನ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕರ್ನಲ್ ಅನಿಲ್ ಕಾಳೆ ಅವರು ಗಾಜಾದಲ್ಲಿನ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ಮೊದಲ ಸಂಯುಕ್ತ ರಾಷ್ಟ್ರದ ಸಿಬ್ಬಂದಿಯಾಗಿದ್ದಾರೆ.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ
ಅಮೆರಿಕದ ಬೇಹುಗಾರಿಕೆ ಸಂಸ್ಥೆಯ ಮಾಜಿ ಅಧಿಕಾರಿಯ ಬಾಂಗ್ಲಾದೇಶದ ರಹಸ್ಯ ಭೇಟಿಯಿಂದ ಚರ್ಚೆಗೆ ವೇಗ
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ