ಗೋವಾದಲ್ಲಿ ಬಿಸಿಲಿನ ತಾಪ ಹೆಚ್ಚಳ, ಕರ್ನಾಟಕದಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ !

ನವ ದೆಹಲಿ – ದೇಶದಲ್ಲಿ ಬಿಸಿಲಿನ ತಾಪದಿಂದ ಹಾಹಾಕಾರವೆದ್ದಿದೆ. ಭಾರತೀಯ ಹವಾಮಾನ ಇಲಾಖೆಯು ದೆಹಲಿ ಸೇರಿದಂತೆ 9 ರಾಜ್ಯಗಳಲ್ಲಿ ಮುಂದಿನ 5 ದಿನಗಳ ಕಾಲ ಉಷ್ಣತೆಯ ಅಲೆ ಬೀಸುವ ಎಚ್ಚರಿಕೆಯನ್ನು ನೀಡಿದೆ. ಇವುಗಳಲ್ಲಿ ದೆಹಲಿ, ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಬಿಹಾರ ಮತ್ತು ಬಂಗಾಳ ಈ ರಾಜ್ಯಗಳು ಸೇರಿವೆ. ಇದಲ್ಲದೇ ಅಸ್ಸಾಂ, ತ್ರಿಪುರಾ, ಒಡಿಶಾ, ಜಾರ್ಖಂಡ್ ಮತ್ತು ಗೋವಾ ರಾಜ್ಯಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆ ಇದೆ.
ಮೇ 17 ರಂದು, 9 ರಾಜ್ಯಗಳ ಅನೇಕ ನಗರಗಳಲ್ಲಿ ಉಷ್ಣತೆಯ ಅಲೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ, ತಾಪಮಾನವು 43 ರಿಂದ 46 ಡಿಗ್ರಿಗಳವರೆಗೆ ದಾಖಲಾಗಿದೆ. ಆಗ್ರಾದಲ್ಲಿ ಗರಿಷ್ಠ ತಾಪಮಾನ 46.9 ಡಿಗ್ರಿ ತಲುಪಿತ್ತು.
ದಕ್ಷಿಣ ಭಾರತದಲ್ಲಿ ಧಾರಾಕಾರ ಮಳೆಯ ಲಕ್ಷಣ !
ದಕ್ಷಿಣ ಭಾರತದ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಮುಂದಿನ 5 ದಿನ ಧಾರಾಕಾರ ಮಳೆಯಾಗಲಿದೆ. ಮೇ 20 ರಿಂದ ಕರ್ನಾಟಕದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 17 ರಿಂದ 21 ರವರೆಗೆ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ.
Heatwave To Continue In Parts Of Northwest India For Another 5 Days https://t.co/KA7o3cgnKZ pic.twitter.com/0FvmHeqHYx
— NDTV News feed (@ndtvfeed) May 18, 2024
ಸಿಂಧೂ ಜಲ ಒಪ್ಪಂದ; ಪಾಕಿಸ್ತಾನ ತನ್ನ ಅಣು ನೀತಿಯನ್ನು ಬದಲಿಸಿ ಅಣುಬಾಂಬ್ ಬಳಸಬೇಕು! : Bilawal Bhutto
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!