ಮುಖ್ಯಮಂತ್ರಿಗಳ ನಿವಾಸದಲ್ಲಿ ಸಂಸದೆ ಸ್ವಾತಿ ಮಲಿವಾಲ್ ಅವರನ್ನು ಥಳಿಸಿದ ಪ್ರಕರಣ

ನವದೆಹಲಿ – ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ, ಅರವಿಂದ ಕೇಜ್ರಿವಾಲ್ ಅವರ ನಿವಾಸ ಸ್ಥಾನದಲ್ಲಿ ಥಳಿಸಿರುವ ಪ್ರಕರಣದಲ್ಲಿ ಪೊಲೀಸರು ಕೇಜ್ರಿವಾಲ್ ಅವರ ಸಚಿವ ವಿಭವ್ ಕುಮಾರ್ ಅವರನ್ನು ಬಂಧಿಸಿದ್ದಾರೆ.
ಸಂಸದೆ ಮಲಿವಾಲ್ ಅವರ ವೈದ್ಯಕೀಯ ಪರೀಕ್ಷೆಯ ವರದಿ ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ವರದಿಯಲ್ಲಿ ೨ ಛಾಯಾ ಚಿತ್ರಗಳ ಸಹಿತ ಸ್ವಾತಿ ಅವರ ಕಣ್ಣುಗಳ ಮೇಲೆ ಮತ್ತು ಕಾಲುಗಳ ಮೇಲೆ ಗಾಯಗಳ ಗುರುತು ಇರುವುದಾಗಿ ನಮೂದಿಸಲಾಗಿದೆ. ದೆಹಲಿಯ ಪೊಲೀಸರು ಏಮ್ಸ್ ಆಸ್ಪತ್ರೆಯಲ್ಲಿ ಮಲಿವಾಲ್ ಅವರ ವೈದ್ಯಕೀಯ ಪರೀಕ್ಷೆ ಮಾಡಿದ್ದಾರೆ. ಮೇ ೧೩ ರಂದು ಈ ಥಳಸಿರುವ ಘಟನೆ ನಡೆದಿದೆ.
ಮಲಿವಾಲ್ ಅವರ ವಿರುದ್ಧ ಕೂಡ ದೂರು ದಾಖಲು
ವಿಭವ್ ಕುಮಾರ್ ಅವರು ಸಂಸದೆ ಸ್ವಾತಿ ಮಲಿವಾಲ್ ಅವರ ವಿರುದ್ಧ ದೂರು ನೀಡಿದ್ದು, ಸ್ವಾತಿ ಅವರು ಮುಖ್ಯಮಂತ್ರಿಗಳ ನಿವಾಸ ಸ್ಥಾನದಲ್ಲಿ ಬಲವಂತವಾಗಿ ಪ್ರವೇಶಿಸಿದ್ದರು ಮತ್ತು ಅವರನ್ನು ತಡೆದಾಗ ಗಲಾಟೆ ನಡೆಸಿದರು, ಹಾಗೂ ಸಿಬ್ಬಂದಿಗಳಿಗೆ ಬೈಗುಳ ಬೈದಿದ್ದಾರೆ ಎಂದು ವಿಭವ್ ದೂರಿನಲ್ಲಿ ಹೇಳಿದ್ದಾರೆ.
ಸಂಪಾದಕೀಯ ನಿಲುವುಮುಖ್ಯಮಂತ್ರಿಗಳ ಮನೆಯಲ್ಲೇ ಮಹಿಳೆಯರು ಸುರಕ್ಷಿತವಿಲ್ಲ ಎಂದಾದರೆ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಪರಿಸ್ಥಿತಿ ಹೇಗಿರಬಹುದು, ಎಂಬುದರ ಯೋಚನೆ ಮಾಡದಿರುವುದೇ ಒಳ್ಳೆಯದು ! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ