Hubballi DCP Suspended : ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿದಂತೆ ಉಪ ಪೊಲೀಸ್ ಆಯುಕ್ತರ ಅಮಾನತು!

ಹುಬ್ಬಳ್ಳಿ – ವಿದ್ಯಾರ್ಥಿನಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದಲ್ಲಿ ಧಾರವಾಡ ನಗರದ ಉಪ ಪೊಲೀಸ್ ಆಯುಕ್ತ ಎಂ. ರಾಜೀವ್ ಅವರನ್ನು ಅಮಾನತುಗೊಳಿಸಲಾಗಿದೆ. ಇದೇ ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ಹುಬ್ಬಳ್ಳಿ- ಧಾರವಾಡ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಒಂದು ತಿಂಗಳೊಳಗೆ ಇಬ್ಬರು ಬಾಲಕಿಯರ ಹತ್ಯೆ ಆಗಿರುವ ಹಿನ್ನೆಎಲೆಯಲ್ಲಿ ಸರಕಾರ ಈ ನಿರ್ಧಾರ ಕೈಗೊಂಡಿದೆ. ಅಂಜಲಿ ಅಂಬಿಗೇರಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು ಮತ್ತು ಅವಳು ಅದರ ಬಗ್ಗೆ ಪೊಲೀಸರಲ್ಲಿ ದೂರು ದಾಖಲಿಸಿದ್ದಳು; ಆದರೆ ಪೊಲೀಸರು ನಿರ್ಲಕ್ಷಿಸಿದರು. ತದನಂತರ ಅವಳನ್ನು ಕೊಲೆ ಮಾಡಲಾಗಿದೆ ಎಂದು ಮೃತ ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಮೊದಲು ಹುಬ್ಬಳ್ಳಿಯ ನೇಹಾ ಹಿರೇಮಠ್ ಇವಳ ಕೊಲೆಯಾಗಿತ್ತು. ಹಾಗಾಗಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿರುವ ಆರೋಪದ ಮೇಲೆ ಉಪ ಪೊಲೀಸ್ ಆಯುಕ್ತ ರಾಜೀವ್ ಅವರನ್ನು ಅಮಾನತುಗೊಳಿಸಲಾಗಿದೆ. ಗೃಹ ಸಚಿವ ಶ್ರೀ. ಪರಮೇಶ್ವರ್ ಇವರು ಶೀಘ್ರದಲ್ಲೇ ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ.