10 ರಿಂದ 12 ನಕ್ಸಲೀಯರಿಗೆ ಗಾಯ !

ರಾಯಪುರ (ಛತ್ತೀಸ್ಗಢ) – ಛತ್ತೀಸ್ಗಢ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿ ಸಮೀಪದ ದಂತೇವಾಡದಲ್ಲಿ ಮತ್ತೊಮ್ಮೆ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ 7 ನಕ್ಸಲೀಯರ ಹತ್ಯೆ ಮಾಡಲಾಗಿದ್ದು, 10 ರಿಂದ 12 ನಕ್ಸಲೀಯರು ಗಾಯಗೊಂಡಿದ್ದಾರೆ. ಈ ಚಕಮಕಿಯಲ್ಲಿ ಹತರಾದ ನಕ್ಸಲೀಯರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಸ್ತುತ ಛತ್ತೀಸ್ಗಢದಲ್ಲಿ ವಿಶೇಷ ಕಾರ್ಯಾಚರಣೆ ಪಡೆ, ಜಿಲ್ಲಾ ಮೀಸಲು ಪಡೆ, ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ ಮತ್ತು ‘ಕೋಬ್ರಾ ಕಮಾಂಡೋ’ ಸಹಿತ ಅಂದಾಜು 1 ಸಾವಿರ ಸೈನಿಕರ ತಂಡವು ನಕ್ಸಲೀಯರ ವಿರುದ್ಧ ಜಂಟೀ ಕಾರ್ಯಾಚರಣೆ ನಡೆಸುತ್ತಿದೆ. ಇತ್ತೀಚೆಗೆ ಕಾಂಕೆರ, ಬಸ್ತರ್ ಮತ್ತು ವಿಜಾಪುರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಹೆಚ್ಚಿನ ಸಂಖ್ಯೆಯ ನಕ್ಸಲೀಯರು ಹತ್ಯೆಯಾದರು. ಈ ಕಾರ್ಯಾಚರಣೆಯಲ್ಲಿ ಕೆಲವು ಸೈನಿಕರು ಗಾಯಗೊಂಡಿದ್ದಾರೆ.
ಸಂಪಾದಕೀಯ ನಿಲುವುಈಗ, ನಕ್ಸಲೀಯರ ಪಿಡುಗನ್ನು ಬೇರುಸಹಿತ ನಿರ್ಮೂಲನೆ ಮಾಡಲು ಸರ್ಕಾರ ಪ್ರಯತ್ನಿಸಬೇಕು, ಎಂದು ಅಪೇಕ್ಷೆ ! |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ