|

ಬೀದರ (ಕರ್ನಾಟಕ) – ಗುರುನಾನಕ ದೇವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೇ ೨೯ ರಂದು ನಾಟಕದ ಅಭ್ಯಾಸ ನಡೆಯುತ್ತಿರುವಾಗ ‘ಜೈ ಶ್ರೀ ರಾಮ’ ಎಂದು ಘೋಷಣೆ ನೀಡಿದ್ದಕ್ಕೆ ಮುಸಲ್ಮಾನ ವಿದ್ಯಾರ್ಥಿಗಳ ಗುಂಪಿನಿಂದ ಹಿಂದೂ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಲಾಯಿತು. ಈ ದಾಳಿಯಲ್ಲಿ ನಟರಾಜ ಮತ್ತು ವೀರೇಂದ್ರ ಎಂಬ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡರು. ಮೇ ೩೧ ರಂದು ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಾಟಕವನ್ನು ಪ್ರಸ್ತುತಪಡಿಸಲು ಅದರ ಅಭ್ಯಾಸ ನಡೆಯುತ್ತಿತ್ತು. ಈ ಹೊಡೆದಾಟದಿಂದಾಗಿ ಕಾಲೇಜಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.
೧. ಮುಸಲ್ಮಾನ ವಿದ್ಯಾರ್ಥಿಗಳು ‘ಜೈ ಶ್ರೀರಾಮ’ ಘೋಷಣೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದ ನಂತರ ಹಿಂದೂ ವಿದ್ಯಾರ್ಥಿಗಳ ಜೊತೆಗೆ ಅವರ ವಿವಾದ ನಡೆಯಿತು ಮತ್ತು ವಿವಾದವು ಹೊಡೆದಾಟದಲ್ಲಿ ಬದಲಾಯಿತು. ಪೊಲೀಸರಿಗೆ ಈ ಬಗ್ಗೆ ಮಾಹಿತಿ ದೊರೆಯುತ್ತಲೇ ಅವರು ಘಟನಾ ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ಹಿಡಿತಕ್ಕೆ ತೆಗೆದುಕೊಂಡರು. ಈ ಘಟನೆಯ ವಿಡಿಯೋ ಕೂಡ ಪ್ರಸಾರವಾಗಿದೆ.
೨. ಪೊಲೀಸ್ ಅಧಿಕಾರಿ ಚೆನ್ನಬಸವಣ್ಣ ಎಸ್ .ಎಲ್. ಅವರು ಈ ಬಗ್ಗೆ ಮಾತನಾಡಿ, ನಟರಾಜ ಎಂಬವರ ದೂರಿನ ಆಧಾರದ ಮೇಲೆ ೧೭ ಮುಸಲ್ಮಾನ ವಿದ್ಯಾರ್ಥಿಗಳು ಮತ್ತು ಓರ್ವ ದುಷ್ಕರ್ಮಿಯ ವಿರುದ್ಧ ದೂರು ದಾಖಲಿಸಿಕೊಂಡಿದ್ದೇವೆ. ಮುಸಲ್ಮಾನ ವಿದ್ಯಾರ್ಥಿಗಳಿಂದಲೂ ಕೂಡ ದೂರು ದಾಖಲಿಸಲಾಗಿದೆ ಎಂದು ತಿಳಿಸಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!