ಪುರಿ (ಒಡಿಶಾ) ನಲ್ಲಿ ಜಗನ್ನಾಥ ಚಂದನ್ ಯಾತ್ರೆಯ ಸಂದರ್ಭದಲ್ಲಿ ಪಟಾಕಿ ಸ್ಫೋಟ; 15 ಜನರಿಗೆ ಗಾಯ, 4 ಜನರ ಸ್ಥಿತಿ ಚಿಂತಾಜನಕ

ಪುರಿ (ಒಡಿಶಾ) – ಮೇ 29 ರ ರಾತ್ರಿ ಇಲ್ಲಿ ಭಗವಾನ್ ಶ್ರೀ ಜಗನ್ನಾಥನ ಚಂದನ್ ಯಾತ್ರೆಯ ಉತ್ಸವದ ಸಂದರ್ಭದಲ್ಲಿ ಪಟಾಕಿಗಳು ಸ್ಫೋಟಗೊಂಡು 15 ಜನರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಘಟನೆ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಮುಖ್ಯಮಂತ್ರಿಗಳ ಸಹಾಯ ನಿಧಿಯಿಂದ ನೀಡಲಾಗುವುದು ಎಂದು ಹೇಳಿದ್ದಾರೆ.