
ನಾರಾಯಣಪುರ – ಪೊಲೀಸರ ಗೂಢಚಾರ ಎಂಬ ಸಂದೇಹದಿಂದ ಶಾಲೂರಾಮ ಪೊಟಾಯಿ ಹೆಸರಿನ ಓರ್ವ 45 ವರ್ಷದ ವ್ಯಕ್ತಿಯನ್ನು ನಕ್ಸಲರು ಮನೆಯ ಹೊರಗೆ ಎಳೆದು ಹತ್ಯೆ ಮಾಡಿದ್ದಾರೆ. ಈ ಘಟನೆ ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿದೆ. ನಕ್ಸಲರು ಈ ಪ್ರದೇಶದ ಅಭಿವೃದ್ಧಿಯನ್ನು ತಡೆಹಿಡಿಯಲು ಮತ್ತು ಆತಂಕದ ವಾತಾವರಣವನ್ನು ಸೃಷ್ಟಿಸಲು ಹತಾಶೆಯಿಂದ ಅಮಾಯಕ ನಾಗರಿಕರನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಸಿಕ್ಕಿರುವ ಅಧಿಕೃತ ಮಾಹಿತಿಯ ಪ್ರಕಾರ, 15 ರಿಂದ 20 ಶಸ್ತ್ರಸಜ್ಜಿತ ನಕ್ಸಲೀಯರು ಶಾಲುರಾಮ್ ಪೋಟಾಯಿ ಅವರ ಮನೆಯನ್ನು ಸುತ್ತುವರೆದು ಅವರನ್ನು ಮನೆಯಿಂದ ಹೊರಗೆ ಎಳೆದೊಯ್ದು ಕುಟುಂಬಸ್ಥರ ಮತ್ತು ಸ್ಥಳೀಯರ ಮುಂದೆಯೇ ಅಮಾನವೀಯವಾಗಿ ಥಳಿಸಿ ಕೊಲೆ ಮಾಡಿದ್ದಾರೆ. ಪೊಲೀಸರಿಗೆ ಮಾಹಿತಿ ಸಿಕ್ಕ ಬಳಿಕ ಘಟನಾಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಶವಪರೀಕ್ಷೆಗೆ ಕಳುಹಿಸಿದ್ದಾರೆ. ಮಾವೋವಾದಿಗಳ ‘ಕುತುಲ್ ಏರಿಯಾ ಸಮಿತಿ’ ಕರಪತ್ರಗಳನ್ನು ಪ್ರಸಾರ ಮಾಡಿ, ಪೊಟಾಯಿ ಪೊಲೀಸರ ಗೂಢಚಾರ ಎಂದು ಕೆಲಸ ಮಾಡುತ್ತಿದ್ದನು’, ಎಂದು ಹೇಳಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!