ಚಂದ್ರಬಾಬು ನಾಯ್ಡು ಜೂನ್ ೧೨ ರಂದು ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ

ಅಮರಾವತಿ(ಆಂಧ್ರಪ್ರದೇಶ) – ಈ ತಿಂಗಳ ಜೂನ್ ೧೨ ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ತೆಲಗು ದೇಶಂ ಪಕ್ಷದ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭ ಅಮರಾವತಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರು ಉಪಸ್ಥಿತರಿರುವರು. ಚಂದ್ರಬಾಬು ನಾಯ್ಡು ಅವರು ಪ್ರಮಾಣವಚನ ಸ್ವೀಕಾರದ ದಿನದಂದು ಅಮರಾವತಿಯನ್ನು ರಾಜ್ಯದ ರಾಜಧಾನಿ ಎಂದು ಘೋಷಿಸುವ ಸಾಧ್ಯತೆಯಿದೆ. ಭಾಗ್ಯನಗರವನ್ನು ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜಂಟೀ ರಾಜಧಾನಿ ಎಂಬ ೧೦ ವರ್ಷಗಳ ಒಪ್ಪಂದವು ಜೂನ್ ೨ ರಂದು ಕೊನೆಗೊಂಡಿದೆ.