ಶರಣ್ ಪಂಪ್ವೆಲ್ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ನಿಂದ ತಡೆಯಾಜ್ಞೆ

ಮಂಗಳೂರು – ಕಂಕನಾಡಿಯ ರಸ್ತೆಯಲ್ಲಿ ನಮಾಜ್ ಮಾಡುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪ್ರಸಾರ ಮಾಡಿದ್ದ ವಿಶ್ವ ಹಿಂದೂ ಪರಿಷತ್ ವಿಭಾಗೀಯ ಜಂಟಿ ನಿರ್ದೇಶಕ ಶರಣ್ ಪಂಪ್ವೆಲ್ ವಿರುದ್ಧ ದೂರು ದಾಖಲಾಗಿತ್ತು. ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆತಾಜ್ಞೆ ನೀಡಿದೆ. ಶರಣ್ ಪಂಪ್ವೆಲ್ ಪರ ವಕೀಲ ಅರುಣ್ ಶ್ಯಾಮ್ ನ್ಯಾಯಾಲಯದಲ್ಲಿ ಯುಕ್ತಿವಾದ ಮಂಡಿಸಿದ್ದರು.