ಬೆಂಬಲಿಗರ ವಿರುದ್ಧ ದೂರು ದಾಖಲು

ಲಕ್ಷ್ಮಣಪುರಿ – ಶಾಮ್ಲಿ ಜಿಲ್ಲೆಯ ಕೈರಾನಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಇಕ್ರ ಹಸನ್ ಗೆಲುವು ಸಾಧಿಸಿದ್ದಾರೆ. ಅವರು ಬಿಜೆಪಿಯ ಪ್ರದೀಪ್ ಚೌಧರಿ ಅವರನ್ನು ಸೋಲಿಸಿದರು. ಜೂನ್ 4 ರಂದು ಫಲಿತಾಂಶ ಪ್ರಕಟವಾದ ನಂತರ ಇಕ್ರಾ ಹಸನ್ ಅವರ ನೂರಾರು ಬೆಂಬಲಿಗರು ವಿಜಯೋತ್ಸವ ಮೆರವಣಿಗೆ ನಡೆಸಿದರು. ಆ ವೇಳೆ ರಸ್ತೆಯಲ್ಲಿ ಗೊಂಧಲ ಸೃಷ್ಟಿಸಿದ್ದರು. ಈ ಗೊಂಧಲದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ಗಮನಿಸಿದ ಪೊಲೀಸರು 110 ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದು, ಅವರನ್ನು ಗುರುತು ಹಿಡಿಯುವ ಪ್ರಯತ್ನ ಆರಂಭಿಸಿದ್ದಾರೆ.
शामली : सपा से सांसद इकरा हसन के 110 समर्थकों पर केस दर्ज
कैराना लोक सभा समजवादी पार्टी से सांसद है इकरा हसन
जीत के बाद निकाला था जुलुस
मार्ग अवरुद्ध करना समेत कई धाराओं में दर्ज हुआ मुकदमा
थाना आदर्श मंडी में हुआ मुकदमा दर्ज@shamlipolice @Iqra__Hasan @samajwadiparty… pic.twitter.com/3zea0wISpj
— News1Indiatweet (@News1IndiaTweet) June 8, 2024
1. ಪೊಲೀಸ್ ಉಪನಿರೀಕ್ಷಕ ವಿನಯ್ ಕುಮಾರ್ ಅವರು ತಮ್ಮ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ, ಮೆರವಣಿಗೆಯಲ್ಲಿನ ಗೊಂದಲವನ್ನು ಉಲ್ಲೇಖಿಸಿ ಜೂನ್ 8 ರಂದು ಪೊಲೀಸ್ ಠಾಣೆಗೆ ವಿಡಿಯೋ ಬಂದಿದೆ ಎಂದು ಹೇಳಿದ್ದಾರೆ. (ಪೊಲೀಸರು ಕೈಯಲ್ಲಿ ಇಷ್ಟು ದೊಡ್ಡ ವ್ಯವಸ್ಥೆಯನ್ನು ಹೊಂದಿರುವಾಗಲೂ ವಿಡಿಯೋದಿಂದ ಗೊಂಧಲದ ಮಾಹಿತಿ ಪಡೆಯುತ್ತಾರೆ, ಇದು ನಾಚಿಗ್ಗೇಡು ! -ಸಂಪಾದಕರು)
2. ವೀಡಿಯೋದಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡ ಕೆಲವರು ಗಲಾಟೆ ಮಾಡಿ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವುದು ಕಂಡು ಬಂದಿದೆ. ದ್ವಿಚಕ್ರ ವಾಹನ ಸವಾರರು ಅಪಾಯಕಾರಿ ಸ್ಟಂಟ್ಗಳನ್ನು ಮಾಡುತ್ತಿರುವುದು ಕೂಡ ಕಂಡುಬಂದಿದೆ.
3. ಚುನಾವಣೆ ಕಾಲದಲ್ಲಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ಬೆಂಬಲಿಗರ ಈ ವರ್ತನೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಂಗ್ರೆಸ್ ನ ಮುಸ್ಲಿಂ ಸಂಸದರ ಬೆಂಬಲಿಗರಿಂದ ಗೊಂದಲ
ಕೆಲ ದಿನಗಳ ಹಿಂದೆ ಶಾಮ್ಲಿ ಜಿಲ್ಲೆಗೆ ಹೊಂದಿಕೊಂಡಿರುವ ಸಹರಾನ್ಪುರ ಜಿಲ್ಲೆಯಲ್ಲೂ ಇದೇ ರೀತಿಯ ಪರಿಸ್ಥಿತಿ ಬಹಿರಂಗವಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಜನರು ಬೀದಿಗಿಳಿದು ಗೊಂದಲ ಸೃಷ್ಟಿಸಿದರು. ಕಳ್ಳರು ಮಹಿಳೆಯರ ಮುಂದೆ ಅಶ್ಲೀಲ ಸನ್ನೆಗಳನ್ನೂ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಗುರುತಿಸಲಾಗಿದ್ದು ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ.
ನಿರ್ದೇಶಕ ತಾರಿಕ್ ಸಿದ್ದಿಕಿ, ನೃತ್ಯ ಶಿಕ್ಷಕ ಸಾಜಿದ್ ಶೇಖ್ ಮತ್ತು ನಿರೂಪಕಿ ಉಜ್ಮಾ ತಬಸ್ಸುಮ್ ಬಂಧನ!
ಮುಸ್ಲಿಂ ಯುವಕನಿಂದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ: ಮತಾಂತರಕ್ಕಾಗಿ ಒತ್ತಾಯ! : UP Love Jihad
‘ನೀಟ್’ (NEET) ಪರೀಕ್ಷೆಯಿಂದ ಅಸಮಾನತೆ ಉಂಟಾಗುತ್ತಿದ್ದು, 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡಿ! : Tamil Nadu CM Vijay
ಶ್ರೀರಾಮ ಮಂದಿರದ ಕಾಣಿಕೆಗಳ ಕಳ್ಳತನ ಪ್ರಕರಣ: ವಿಶೇಷ ತನಿಖಾ ತಂಡದ (SIT) ಪ್ರಾಥಮಿಕ ವರದಿ ಸರಕಾರಕ್ಕೆ ಸಲ್ಲಿಕೆ : Ram Mandir Donation Theft
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!