ತ್ರಿಶೂರ: ಬಿಜೆಪಿ ಅಭ್ಯರ್ಥಿ ಆಯ್ಕೆಯಾದ ಬಗ್ಗೆ ವಿವಾದ!

ತ್ರಿಶೂರ (ಕೇರಳ) – ಕೇರಳದಲ್ಲಿ ಪ್ರಥಮ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ತ್ರಿಶೂರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ. ಜೂನ್ 7ರಂದು ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಪರಸ್ಪರ ಕೋಲುಗಳಿಂದ ಹೊಡೆದಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 20 ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
ಸಭೆಯಲ್ಲಿ ಜಿಲ್ಲಾಧ್ಯಕ್ಷ ಜೋಸ್ ವಲ್ಲೂರು, ಪ್ರಧಾನ ಕಾರ್ಯದರ್ಶಿ ಸಂಜೀವನ್ ಕುರಿಚಿರಾ ಉಪಸ್ಥಿತರಿದ್ದರು. ಈ ಸೋಲಿಗೆ ಸಂಜೀವನ್ ಕುರಿಚಿರಾ ಅವರು ಜಿಲ್ಲಾಧ್ಯಕ್ಷ ಜೋಸ್ ವಲ್ಲೂರ್ ಹಾಗೂ ಕಾಂಗ್ರೆಸ್ ನ ಮಾಜಿ ಸಂಸದ ಟಿ.ಎನ್. ಪ್ರತಾಪನ್ ಅವರನ್ನು ಹೊಣೆಗಾರರೆಂದು ಆರೋಪಿಸಿದರು. ಈ ಆರೋಪದಿಂದ ಜಿಲ್ಲಾಧ್ಯಕ್ಷ ಜೋಸ್ ವಲ್ಲೂರ್ ಮತ್ತು ಅವರ ಬೆಂಬಲಿಗರು ಆಕ್ರೋಶಗೊಂಡರು. ಇದಾದ ಬಳಿಕ ಕಾರ್ಯಕರ್ತರ ನಡುವೆ ಹೊಡೆದಾಟ ಶುರುವಾಗಿದೆ. ಕಾರ್ಯಕರ್ತರು ಸಂಜೀವನ್ ಅವರನ್ನು ಥಳಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಂಜೀವನ್ ಅವರು ಜೋಸ್ ವಲ್ಲೂರ್ ಮತ್ತು ಅವರ 19 ಸಹಚರರ ವಿರುದ್ಧ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ.
ಸಂಪಾದಕೀಯ ನಿಲುವುಇದು ಗಾಂಧಿವಾದಿ ಮತ್ತು ಅಹಿಂಸಾವಾದಿ ಕಾಂಗ್ರೆಸ್ ! ಇಂತಹ ಕಾಂಗ್ರೆಸ್ ಹಿಂದೂ ಸಂಘಟನೆಗಳನ್ನು ‘ತಾಲಿಬಾನ್’ ಎಂದು ಕರೆಯಲು ಯತ್ನಿಸುತ್ತದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!