
ಒಟಾವಾ (ಕೆನಡಾ) – ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಉತ್ತಮವಾಗಿ ಉಳಿದಿಲ್ಲ. ಭಾರತ ಮತ್ತು ಕೆನಡಾ ನಡುವಿನ ಉದ್ವಿಗ್ನತೆಯ ನಡುವೆ ಕೆನಡಾದ ಗುಪ್ತಚರ ಮುಖ್ಯಸ್ಥ ಡೇವಿಡ್ ವಿಗ್ನಾಲ್ಟ್ ಈ ವರ್ಷದ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಭಾರತಕ್ಕೆ ರಹಸ್ಯವಾಗಿ ಭೇಟಿ ನೀಡಿದ್ದರು. “ಡೇವಿಡ್ ವಿಗ್ನಾಲ್ಟ್ ಅವರ ಭೇಟಿಯ ಉದ್ದೇಶವು ನಿಜ್ಜರ್ ಹತ್ಯೆಗೆ ಸಂಬಂಧಿಸಿದ ಪ್ರಕರಣದ ಬಗ್ಗೆ ಭಾರತೀಯ ಅಧಿಕಾರಿಗಳಿಗೆ ಮಾಹಿತಿ ನೀಡುವುದಾಗಿತ್ತು” ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ.

ಕೆನಡಾದ ಗುಪ್ತಚರ ಸಂಸ್ಥೆಯ ಮುಖ್ಯಸ್ಥರು ನಿಜ್ಜರ್ ಹತ್ಯೆಯ ಬಗ್ಗೆ ಕೆನಡಾದ ತನಿಖೆಯ ಬಗ್ಗೆ ಭಾರತೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಆದಾಗ್ಯೂ, ಕೆನಡಾದ ಅಧಿಕಾರಿ ವಿಗ್ನಾಲ್ಟ್ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಏನು ಚರ್ಚಿಸಿದರು? ಈ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಜೂನ್ 18, 2023 ರಂದು, ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿರುವ ಗುರುದ್ವಾರದ ಹೊರಗೆ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ 4 ಭಾರತೀಯ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ
ಅಮೆರಿಕದ ಬೇಹುಗಾರಿಕೆ ಸಂಸ್ಥೆಯ ಮಾಜಿ ಅಧಿಕಾರಿಯ ಬಾಂಗ್ಲಾದೇಶದ ರಹಸ್ಯ ಭೇಟಿಯಿಂದ ಚರ್ಚೆಗೆ ವೇಗ