
ಅಯೋಧ್ಯೆ – ಇಲ್ಲಿಯ ಶ್ರೀರಾಮ ಮಂದಿರದ ಭದ್ರತೆಗಾಗಿ ನಿಯೋಜಿಸಲಾಗಿದ್ದ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಜೂನ್ 19 ರ ಮುಂಜಾನೆ ಈ ಘಟನೆ ನಡೆದಿದೆ. ಈ ಯೋಧನ ಹೆಸರು ಶತ್ರುಘ್ನ ವಿಶ್ವಕರ್ಮ ಮತ್ತು ಅವನಿಗೆ 25 ವರ್ಷ ಆಗಿತ್ತು. ಈತ ಅಂಬೇಡ್ಕರ್ನಗರದ ನಿವಾಸಿಯಾಗಿದ್ದ. ಪೊಲೀಸ್ ಮೂಲಗಳ ಪ್ರಕಾರ, ಮುಂಜಾನೆ ಶ್ರೀರಾಮ ಮಂದಿರ ಪ್ರದೇಶದಲ್ಲಿ ಗುಂಡಿನ ಸದ್ದು ಕೇಳಿಬಂದಿತ್ತು. ಸಹ ಭದ್ರತಾ ಸಿಬ್ಬಂದಿ ಓಡಿ ಬಂದು ನೋಡಿದಾಗ ವಿಶ್ವಕರ್ಮನಿಗೆ ಗುಂಡು ತಗುಲಿರುವುದು ಕಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಯೋಧನ ಸಾವಿನಿಂದಾಗಿ ದೇವಾಲಯ ಪ್ರದೇಶದಲ್ಲಿ ಆತಂಕ ಸೃಷ್ಟಿಯಾಗಿದೆ. ಪೊಲೀಸ್ ಮಹಾನಿರೀಕ್ಷಕರು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಇದು ಆತ್ಮಹತ್ಯೆ ಅಥವಾ ಅಪಘಾತವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !