
ಅಯೋಧ್ಯೆ – ಇಲ್ಲಿಯ ಶ್ರೀರಾಮ ಮಂದಿರದ ಭದ್ರತೆಗಾಗಿ ನಿಯೋಜಿಸಲಾಗಿದ್ದ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಜೂನ್ 19 ರ ಮುಂಜಾನೆ ಈ ಘಟನೆ ನಡೆದಿದೆ. ಈ ಯೋಧನ ಹೆಸರು ಶತ್ರುಘ್ನ ವಿಶ್ವಕರ್ಮ ಮತ್ತು ಅವನಿಗೆ 25 ವರ್ಷ ಆಗಿತ್ತು. ಈತ ಅಂಬೇಡ್ಕರ್ನಗರದ ನಿವಾಸಿಯಾಗಿದ್ದ. ಪೊಲೀಸ್ ಮೂಲಗಳ ಪ್ರಕಾರ, ಮುಂಜಾನೆ ಶ್ರೀರಾಮ ಮಂದಿರ ಪ್ರದೇಶದಲ್ಲಿ ಗುಂಡಿನ ಸದ್ದು ಕೇಳಿಬಂದಿತ್ತು. ಸಹ ಭದ್ರತಾ ಸಿಬ್ಬಂದಿ ಓಡಿ ಬಂದು ನೋಡಿದಾಗ ವಿಶ್ವಕರ್ಮನಿಗೆ ಗುಂಡು ತಗುಲಿರುವುದು ಕಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಯೋಧನ ಸಾವಿನಿಂದಾಗಿ ದೇವಾಲಯ ಪ್ರದೇಶದಲ್ಲಿ ಆತಂಕ ಸೃಷ್ಟಿಯಾಗಿದೆ. ಪೊಲೀಸ್ ಮಹಾನಿರೀಕ್ಷಕರು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಇದು ಆತ್ಮಹತ್ಯೆ ಅಥವಾ ಅಪಘಾತವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಯುದ್ಧದಲ್ಲಿ ಅಮೆರಿಕಾವನ್ನು ಬೆಂಬಲಿಸುವ ‘ನಾಟೋ’ ಸದಸ್ಯ ದೇಶಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ! – ಇರಾನ