ಅಯೋಧ್ಯೆಯ ಶ್ರೀರಾಮ ಮಂದಿರ ಪ್ರದೇಶದಲ್ಲಿ ಗುಂಡಿನ ದಾಳಿಯಿಂದ ಯೋಧನ ಸಾವು !

ಅಯೋಧ್ಯೆ – ಇಲ್ಲಿಯ ಶ್ರೀರಾಮ ಮಂದಿರದ ಭದ್ರತೆಗಾಗಿ ನಿಯೋಜಿಸಲಾಗಿದ್ದ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಜೂನ್ 19 ರ ಮುಂಜಾನೆ ಈ ಘಟನೆ ನಡೆದಿದೆ. ಈ ಯೋಧನ ಹೆಸರು ಶತ್ರುಘ್ನ ವಿಶ್ವಕರ್ಮ ಮತ್ತು ಅವನಿಗೆ 25 ವರ್ಷ ಆಗಿತ್ತು. ಈತ ಅಂಬೇಡ್ಕರ್‌ನಗರದ ನಿವಾಸಿಯಾಗಿದ್ದ. ಪೊಲೀಸ್ ಮೂಲಗಳ ಪ್ರಕಾರ, ಮುಂಜಾನೆ ಶ್ರೀರಾಮ ಮಂದಿರ ಪ್ರದೇಶದಲ್ಲಿ ಗುಂಡಿನ ಸದ್ದು ಕೇಳಿಬಂದಿತ್ತು. ಸಹ ಭದ್ರತಾ ಸಿಬ್ಬಂದಿ ಓಡಿ ಬಂದು ನೋಡಿದಾಗ ವಿಶ್ವಕರ್ಮನಿಗೆ ಗುಂಡು ತಗುಲಿರುವುದು ಕಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಯೋಧನ ಸಾವಿನಿಂದಾಗಿ ದೇವಾಲಯ ಪ್ರದೇಶದಲ್ಲಿ ಆತಂಕ ಸೃಷ್ಟಿಯಾಗಿದೆ. ಪೊಲೀಸ್ ಮಹಾನಿರೀಕ್ಷಕರು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಇದು ಆತ್ಮಹತ್ಯೆ ಅಥವಾ ಅಪಘಾತವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.