ರಾಜ್ಯದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯನ ಬಂಧನ !

ರಾಜ್ಯದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಭಾಗಿ

ಕಾರವಾರ – ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ವಿಷಯಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಅಬ್ದುಲ್ ಶಕೂರ್ ಹೆಸರಿನ ಸದಸ್ಯ ನನ್ನು ರಾಷ್ಟ್ರೀಯ ತನಿಖಾ ದಳವು ಶಿರಸಿ ತಾಲೂಕಿನ ದಾಸನಕೊಪ್ಪಳದಿಂದ ಬಂಧಿಸಿದೆ.

ದುಬೈನಲ್ಲಿ ಕೆಲಸ ಮಾಡುತ್ತಿರುವ ಅಬ್ದುಲ್ ಶಕೂರ್ ಕೆಲವು ದಿನಗಳ ಹಿಂದೆ ಬಕ್ರಿದ್ ಆಚರಿಸಲು ತನ್ನ ಊರಿಗೆ ಬಂದಿದ್ದನು. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಜೊತೆಗೆ ಇತರ ಕೆಲವು ಸ್ಥಳಗಳಲ್ಲಿ ನಡೆದ ಬಾಂಬ್ ಸ್ಫೋಟಗಳಲ್ಲಿ ಭಾಗಿಯಾಗಿರುವನೆಂದು ಆತನ ಮೇಲೆ ಆರೋಪವಿದೆ.