
ಚೆನ್ನೈ (ತಮಿಳುನಾಡು) – ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿದ್ದರಿಂದ ಸಾವನ್ನಪ್ಪಿದವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಹಾಗೂ 30ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆಯನ್ನು ವಿರೋಧಿಸಿ ಅಣ್ಣಾದ್ರಮುಕ ಕಾರ್ಯಕರ್ತರು ತಮಿಳುನಾಡು ವಿಧಾನಸಭೆಯ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಸೌಧದ ಪರಿಸರದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿಯವರು ಈ ಪ್ರಕರಣದಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಮತ್ತೊಂದೆಡೆ, ತಮಿಳುನಾಡು ಸರಕಾರದ ಪರವಾಗಿ. ಈ ಪ್ರಕರಣದಲ್ಲಿ ಪೊಲೀಸರು 49 ವರ್ಷದ ಗೋವಿಂದರಾಜ್ ಉರ್ಫ ಕನ್ನುಕುಟ್ಟಿಯನ್ನು ಬಂಧಿಸಿದ್ದಾರೆ. ಈತನಿಂದ ವಶಪಡಿಸಿಕೊಂಡ ಅಂದಾಜು 200 ಲೀಟರ್ ಅಕ್ರಮ ಮದ್ಯವನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಮಾರಣಾಂತಿಕ ‘ಮೀಥೇನ್’ ಅಂಶವಿರುವುದು ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ ಸ್ಟಾಲಿನ್ ಈ ಘಟನೆಯ ತನಿಖೆಗೆ ಆದೇಶಿಸಿದ್ದಾರೆ ಎಂದು ಹೇಳಿದೆ.
ಸಂಪಾದಕೀಯ ನಿಲುವುಎಲ್ಲಿಯವರೆಗೆ ಸರಕಾರ ಮದ್ಯವನ್ನು ‘ಆದಾಯ ಗಳಿಸುವ ಮೂಲ’ ಎಂದು ನೋಡುವುದನ್ನು ಮುಂದುವರಿಸುತ್ತದೆಯೋ, ಅಲ್ಲಿಯವರೆಗೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ! ಜನರು ಸರಕಾರಕ್ಕೆ ಮದ್ಯ ನಿಷೇಧಿಸಲು ಒತ್ತಡ ಹೇರಬೇಕು ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !