ಕೇಂದ್ರ ಸರಕಾರದ ಹೊಸ ನಿಯಮ

ನವದೆಹಲಿ: ಸರ್ಕಾರಿ ಕಚೇರಿಗಳಿಗೆ ತಡವಾಗಿ ಬರುವ ನೌಕರರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಕಚೇರಿ ವೇಳೆಗಿಂತ ವಿಳಂಬವಾಗಿ ನೌಕರರು ತಲುಪಿದರೆ, ಅವರ ಕೆಲಸದ ದಿನವನ್ನು ಅರ್ಧ ದಿನವೆಂದು ಮಾತ್ರ ಪರಿಗಣಿಸಲಾಗುವುದು, ಅಂದರೆ, ತಡವಾಗಿ ಬಂದಲ್ಲಿ ಅರ್ಧದಿನದ ಸಾಂದರ್ಭಿಕ ರಜೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಸಾರ್ವಜನಿಕರಿಂದ ಬಂದ ವಿವಿಧ ದೂರುಗಳನ್ನು ಆಧರಿಸಿ ಕೇಂದ್ರ ಸರಕಾರ ಈ ನಿಯಮ ಜಾರಿಗೆ ತಂದಿದೆ.
ಕೇಂದ್ರ ಸರಕಾರವು ನೌಕರರಿಗೆ ಕಚೇರಿ ವೇಳೆಯಲ್ಲಿ 15 ನಿಮಿಷಗಳವರೆಗೆ ವಿಳಂಬವಾಗಿ ಬರಲು ಮಾತ್ರ ಅವಕಾಶ ನೀಡಿದೆ. ಇದಕ್ಕಿಂತ ಹೆಚ್ಚು ವಿಳಂಬವಾದರೆ ಅರ್ಧ ದಿನ ಎಂದು ಪರಿಗಣಿಸಲಾಗುವುದು ಎಂದು ಖಡಕ್ ಆಗಿ ಹೇಳಿದೆ.
ಸಂಪಾದಕೀಯ ನಿಲುವುಹಲವು ದಶಕಗಳಿಂದ ಇದೇ ರೀತಿ ನಡೆದುಕೊಂಡು ಬರುತ್ತಿರುವಾಗ, ಈಗ ಈ ನಿರ್ಧಾರವನ್ನು ತೆಗೆದುಕೊಂಡಿರುವುದು ಎಷ್ಟು ಪರಿಣಾಮಕಾರಿಯಾಗಲಿದೆ ಎನ್ನುವುದು ಒಂದು ಪ್ರಶ್ನೆಯಾಗಿದೆ. ಈಗ ಇದೇ ರೀತಿ ಮತಕ್ಷೇತ್ರದಲ್ಲಿ ಕೆಲಸ ಮಾಡದವರು, ಸಂಸತ್ತಿಗೆ ಹಾಜರಾಗದೇ ಇರುವವರು, ಸಂಸತ್ತಿಗೆ ತಡವಾಗಿ ಬರುವ ಸಂಸದರು ಹಾಗೂ ಸಚಿವರ ವಿರುದ್ಧ ಕೂಡ ಕ್ರಮ ಕೈಗೊಳ್ಳಬೇಕು. |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!