ಕೇಂದ್ರ ಸರಕಾರದ ಹೊಸ ನಿಯಮ

ನವದೆಹಲಿ: ಸರ್ಕಾರಿ ಕಚೇರಿಗಳಿಗೆ ತಡವಾಗಿ ಬರುವ ನೌಕರರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಕಚೇರಿ ವೇಳೆಗಿಂತ ವಿಳಂಬವಾಗಿ ನೌಕರರು ತಲುಪಿದರೆ, ಅವರ ಕೆಲಸದ ದಿನವನ್ನು ಅರ್ಧ ದಿನವೆಂದು ಮಾತ್ರ ಪರಿಗಣಿಸಲಾಗುವುದು, ಅಂದರೆ, ತಡವಾಗಿ ಬಂದಲ್ಲಿ ಅರ್ಧದಿನದ ಸಾಂದರ್ಭಿಕ ರಜೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಸಾರ್ವಜನಿಕರಿಂದ ಬಂದ ವಿವಿಧ ದೂರುಗಳನ್ನು ಆಧರಿಸಿ ಕೇಂದ್ರ ಸರಕಾರ ಈ ನಿಯಮ ಜಾರಿಗೆ ತಂದಿದೆ.
ಕೇಂದ್ರ ಸರಕಾರವು ನೌಕರರಿಗೆ ಕಚೇರಿ ವೇಳೆಯಲ್ಲಿ 15 ನಿಮಿಷಗಳವರೆಗೆ ವಿಳಂಬವಾಗಿ ಬರಲು ಮಾತ್ರ ಅವಕಾಶ ನೀಡಿದೆ. ಇದಕ್ಕಿಂತ ಹೆಚ್ಚು ವಿಳಂಬವಾದರೆ ಅರ್ಧ ದಿನ ಎಂದು ಪರಿಗಣಿಸಲಾಗುವುದು ಎಂದು ಖಡಕ್ ಆಗಿ ಹೇಳಿದೆ.
ಸಂಪಾದಕೀಯ ನಿಲುವುಹಲವು ದಶಕಗಳಿಂದ ಇದೇ ರೀತಿ ನಡೆದುಕೊಂಡು ಬರುತ್ತಿರುವಾಗ, ಈಗ ಈ ನಿರ್ಧಾರವನ್ನು ತೆಗೆದುಕೊಂಡಿರುವುದು ಎಷ್ಟು ಪರಿಣಾಮಕಾರಿಯಾಗಲಿದೆ ಎನ್ನುವುದು ಒಂದು ಪ್ರಶ್ನೆಯಾಗಿದೆ. ಈಗ ಇದೇ ರೀತಿ ಮತಕ್ಷೇತ್ರದಲ್ಲಿ ಕೆಲಸ ಮಾಡದವರು, ಸಂಸತ್ತಿಗೆ ಹಾಜರಾಗದೇ ಇರುವವರು, ಸಂಸತ್ತಿಗೆ ತಡವಾಗಿ ಬರುವ ಸಂಸದರು ಹಾಗೂ ಸಚಿವರ ವಿರುದ್ಧ ಕೂಡ ಕ್ರಮ ಕೈಗೊಳ್ಳಬೇಕು. |
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!