ಕೇಂದ್ರ ಸರಕಾರದ ಹೊಸ ನಿಯಮ

ನವದೆಹಲಿ: ಸರ್ಕಾರಿ ಕಚೇರಿಗಳಿಗೆ ತಡವಾಗಿ ಬರುವ ನೌಕರರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಕಚೇರಿ ವೇಳೆಗಿಂತ ವಿಳಂಬವಾಗಿ ನೌಕರರು ತಲುಪಿದರೆ, ಅವರ ಕೆಲಸದ ದಿನವನ್ನು ಅರ್ಧ ದಿನವೆಂದು ಮಾತ್ರ ಪರಿಗಣಿಸಲಾಗುವುದು, ಅಂದರೆ, ತಡವಾಗಿ ಬಂದಲ್ಲಿ ಅರ್ಧದಿನದ ಸಾಂದರ್ಭಿಕ ರಜೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಸಾರ್ವಜನಿಕರಿಂದ ಬಂದ ವಿವಿಧ ದೂರುಗಳನ್ನು ಆಧರಿಸಿ ಕೇಂದ್ರ ಸರಕಾರ ಈ ನಿಯಮ ಜಾರಿಗೆ ತಂದಿದೆ.
ಕೇಂದ್ರ ಸರಕಾರವು ನೌಕರರಿಗೆ ಕಚೇರಿ ವೇಳೆಯಲ್ಲಿ 15 ನಿಮಿಷಗಳವರೆಗೆ ವಿಳಂಬವಾಗಿ ಬರಲು ಮಾತ್ರ ಅವಕಾಶ ನೀಡಿದೆ. ಇದಕ್ಕಿಂತ ಹೆಚ್ಚು ವಿಳಂಬವಾದರೆ ಅರ್ಧ ದಿನ ಎಂದು ಪರಿಗಣಿಸಲಾಗುವುದು ಎಂದು ಖಡಕ್ ಆಗಿ ಹೇಳಿದೆ.
ಸಂಪಾದಕೀಯ ನಿಲುವುಹಲವು ದಶಕಗಳಿಂದ ಇದೇ ರೀತಿ ನಡೆದುಕೊಂಡು ಬರುತ್ತಿರುವಾಗ, ಈಗ ಈ ನಿರ್ಧಾರವನ್ನು ತೆಗೆದುಕೊಂಡಿರುವುದು ಎಷ್ಟು ಪರಿಣಾಮಕಾರಿಯಾಗಲಿದೆ ಎನ್ನುವುದು ಒಂದು ಪ್ರಶ್ನೆಯಾಗಿದೆ. ಈಗ ಇದೇ ರೀತಿ ಮತಕ್ಷೇತ್ರದಲ್ಲಿ ಕೆಲಸ ಮಾಡದವರು, ಸಂಸತ್ತಿಗೆ ಹಾಜರಾಗದೇ ಇರುವವರು, ಸಂಸತ್ತಿಗೆ ತಡವಾಗಿ ಬರುವ ಸಂಸದರು ಹಾಗೂ ಸಚಿವರ ವಿರುದ್ಧ ಕೂಡ ಕ್ರಮ ಕೈಗೊಳ್ಳಬೇಕು. |
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!