
ನವದೆಹಲಿ – ಇತ್ತೀಚೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದರು. ಅವರು ಪ್ರಧಾನಿ ಮೋದಿಯವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಿದರು. ಇದಾದ ನಂತರ, ಪ್ರಧಾನಿ ಮೋದಿಯವರು ಬಾಂಗ್ಲಾದೇಶದಿಂದ ಭಾರತಕ್ಕೆ ಚಿಕಿತ್ಸೆಗಾಗಿ ಬರುವವರಿಗೆ ‘ಇ-ಮೆಡಿಕಲ್ ವೀಸಾ’ ಸೌಲಭ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸುವುದಾಗಿ ಘೋಷಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿ, ಬಾಂಗ್ಲಾದೇಶದ ಉತ್ತರ-ಪಶ್ಚಿಮ ಭಾಗದ ಜನರ ಅನುಕೂಲಕ್ಕಾಗಿ ಬಾಂಗ್ಲಾದೇಶದ ರಂಗ್ಪುರದಲ್ಲಿ ಹೊಸ ಸಹಾಯಕ ಹೈಕಮಿಷನ್ ತೆರೆಯುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಬಾಂಗ್ಲಾದೇಶವು ಭಾರತದ ದೊಡ್ಡ ಅಭಿವೃದ್ಧಿ ಪಾಲುದಾರನಾಗಿದ್ದು, ನಾವು ಬಾಂಗ್ಲಾದೇಶದೊಂದಿಗಿನ ನಮ್ಮ ಸಂಬಂಧಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತೇವೆ. ಕಳೆದ ವರ್ಷ ನಾವು ಒಟ್ಟಿಗೆ ಅನೇಕ ಪ್ರಮುಖ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಪೂರ್ಣಗೊಳಿಸಿದ್ದೇವೆ. ಎರಡೂ ದೇಶಗಳಲ್ಲಿ ಭಾರತೀಯ ರೂಪಾಯಿ ವಹಿವಾಟು ಆರಂಭವಾಗಿದೆ ಎಂದು ಪ್ರಧಾನಿ ಹೇಳಿದರು.
The ‘E-Medical Visa’ facility for people coming to India from Bangladesh for treatment to be launched !
Will this scheme benefit the Hindus or the Mu$l!ms of Bangladesh ?
Hindus feel that the government should also implement a scheme for the protection of Hindus in #Bangladesh… pic.twitter.com/a4OnZFkNUa
— Sanatan Prabhat (@SanatanPrabhat) June 24, 2024
ಸಂಪಾದಕೀಯ ನಿಲುವುಈ ಯೋಜನೆಯಿಂದ ಬಾಂಗ್ಲಾದೇಶದ ಹಿಂದೂಗಳಿಗೆ ಲಾಭವಾಗುವುದೋ ಅಥವಾ ಅಲ್ಲಿನ ಮುಸ್ಲಿಮರಿಗೆ? ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಗಾಗಿ ಸರಕಾರವು ಯೋಜನೆಯನ್ನು ಜಾರಿಗೊಳಿಸಬೇಕು ಮತ್ತು ಭಾರತದಲ್ಲಿರುವ ಬಾಂಗ್ಲಾದೇಶದ ನುಸುಳುಕೋರರನ್ನು ಹೊರ ಹಾಕಲು ಯುದ್ಧೋಪಾದಿಯಲ್ಲಿ ಪ್ರಯತ್ನಗಳನ್ನು ಮಾಡಬೇಕು ಎಂದು ಹಿಂದೂಗಳ ಅಪೇಕ್ಷೆಯಾಗಿದೆ. |
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ