|

ದುರ್ಗ (ಛತ್ತೀಸಗಡ) – ಕರುವಿನ ಛಿದ್ರಗೊಳಿಸಿದ ತಲೆ ಪತ್ತೆಯಾದ ನಂತರ ಈ ಪ್ರದೇಶದಲ್ಲಿ ಉದ್ವಿಗ್ನತೆ ನಿರ್ಮಾಣವಾಗಿದೆ. ‘ಹಿಂದೂ ಯುವ ಮಂಚ’ ಮತ್ತು ‘ರಾಷ್ಟ್ರೀಯ ಬಜರಂಗದಳ’ದ ನೂರಾರು ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿದರು. ಅಲ್ಲದೆ ರಾತ್ರಿ ಪೋಲೀಸ್ ಠಾಣೆಗೂ ಮುತ್ತಿಗೆ ಹಾಕಿದರು. ಆಗ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದರು. ಬಳಿಕ ನಡೆದ ಮಾರಾಮಾರಿಯಲ್ಲಿ ಓರ್ವ ಪೊಲೀಸ ಅಧೀಕ್ಷಕರು ಗಾಯಗೊಂಡರು. ಈ ಪ್ರಕರಣದ ಕುರಿತು ಪೊಲೀಸರು ಕರುವಿನ ತಲೆಯನ್ನು ನಾಯಿ ಅಲ್ಲಿಗೆ ತಂದಿತ್ತು ಎಂದು ಹೇಳಿದ್ದಾರೆ. ಈ ಬಗ್ಗೆ ಭಿಲಾಯಿ ಹಿರಿಯ ಪೊಲೀಸ್ ಅಧೀಕ್ಷಕ ಸುಖನಂದನ ರಾಥೋಡ ಅವರು ಮಾತನಾಡಿ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಕರುವಿನ ತಲೆಯನ್ನು ತನಿಖೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಸಂಪಾದಕೀಯ ನಿಲುವು`ನಾಯಿಯೊಂದು ಕರುವಿನ ತಲೆ ತಂದು ಎಸೆದಿದೆ’, ಎಂದು ಹೇಳಿದರೂ ಕರುವಿನ ಹತ್ಯೆಯಾಗಿರುವುದು ಸತ್ಯವಾಗಿದ್ದು ಅದರ ತನಿಖೆ ಪೊಲೀಸರು ಯಾವಾಗ ಮಾಡುವರು? ಛತ್ತೀಸಗಡದಲ್ಲಿ ಭಾಜಪ ಸರಕಾರ ಇರುವಾಗ ಇಂತಹ ಘಟನೆಗಳು ನಡೆಯಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ. |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!