|

ದುರ್ಗ (ಛತ್ತೀಸಗಡ) – ಕರುವಿನ ಛಿದ್ರಗೊಳಿಸಿದ ತಲೆ ಪತ್ತೆಯಾದ ನಂತರ ಈ ಪ್ರದೇಶದಲ್ಲಿ ಉದ್ವಿಗ್ನತೆ ನಿರ್ಮಾಣವಾಗಿದೆ. ‘ಹಿಂದೂ ಯುವ ಮಂಚ’ ಮತ್ತು ‘ರಾಷ್ಟ್ರೀಯ ಬಜರಂಗದಳ’ದ ನೂರಾರು ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿದರು. ಅಲ್ಲದೆ ರಾತ್ರಿ ಪೋಲೀಸ್ ಠಾಣೆಗೂ ಮುತ್ತಿಗೆ ಹಾಕಿದರು. ಆಗ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದರು. ಬಳಿಕ ನಡೆದ ಮಾರಾಮಾರಿಯಲ್ಲಿ ಓರ್ವ ಪೊಲೀಸ ಅಧೀಕ್ಷಕರು ಗಾಯಗೊಂಡರು. ಈ ಪ್ರಕರಣದ ಕುರಿತು ಪೊಲೀಸರು ಕರುವಿನ ತಲೆಯನ್ನು ನಾಯಿ ಅಲ್ಲಿಗೆ ತಂದಿತ್ತು ಎಂದು ಹೇಳಿದ್ದಾರೆ. ಈ ಬಗ್ಗೆ ಭಿಲಾಯಿ ಹಿರಿಯ ಪೊಲೀಸ್ ಅಧೀಕ್ಷಕ ಸುಖನಂದನ ರಾಥೋಡ ಅವರು ಮಾತನಾಡಿ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಕರುವಿನ ತಲೆಯನ್ನು ತನಿಖೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಸಂಪಾದಕೀಯ ನಿಲುವು`ನಾಯಿಯೊಂದು ಕರುವಿನ ತಲೆ ತಂದು ಎಸೆದಿದೆ’, ಎಂದು ಹೇಳಿದರೂ ಕರುವಿನ ಹತ್ಯೆಯಾಗಿರುವುದು ಸತ್ಯವಾಗಿದ್ದು ಅದರ ತನಿಖೆ ಪೊಲೀಸರು ಯಾವಾಗ ಮಾಡುವರು? ಛತ್ತೀಸಗಡದಲ್ಲಿ ಭಾಜಪ ಸರಕಾರ ಇರುವಾಗ ಇಂತಹ ಘಟನೆಗಳು ನಡೆಯಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ. |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ